ಚಿರಂಜೀವಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮ ವಿಭೂಷಣ ಪ್ರಶಸ್ತಿ ಪ್ರಧಾನ ಆಗಿದೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಆಧರಿಸಿ ಈ ಅವಾರ್ಡ್ ನೀಡಲಾಗಿದೆ. ದೆಹಲಿಯಲ್ಲಿ ಗುರುವಾರ ಮೇ 9 ನಡೆದ ಕಾರ್ಯಕ್ರಮದಲ್ಲಿ ಚಿರಂಜೀವಿ ಅವರು ಈ ಪ್ರಶಸ್ತಿಯನ್ನು ಪಡೆದರು. ಈ ಕ್ಷಣ ಅವರ ಕುಟುಂಬದವರಿಗೆ, ಆಪ್ತರಿಗೆ ಹಾಗೂ ಅಭಿಮಾನಿಗಳಿಗೆ ಹೆಮ್ಮೆಯ ಕ್ಷಣ ಆಗಿತ್ತು. ಚಿರಂಜೀವಿಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.