ದೇವನಹಳ್ಳಿ: ಎನ್ಎಸ್ಯುಐ ರಾಜ್ಯ ಪ್ರಧಾನಕಾರ್ಯದರ್ಶಿಯಾಗಿ ಮುಖೆಶ್ ಬಾಬು ಅವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ಕೀರ್ತಿಗಣೇಶ್ ಆದೇಶ ಪತ್ರ ನೀಡಿದರು.
ಆದೇಶ ಪತ್ರ ಸ್ವೀಕರಿಸಿ ಮಾತನಾಡಿದ ಮುಖೇಶ್ ಬಾಬು, ನನಗೆ ಎನ್ಎಸ್ಯುಐ ಅಧ್ಯಕ್ಷ ಸ್ಥಾನದ ಜತೆಗೆ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯ ಉಸ್ತುವಾರಿ ನೀಡಿದ್ದಾರೆ. ಹಾಗಾಗಿ ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದರ ಮೂಲಕ ಬೂತ್ ಮಟ್ಟದಿಂದ ಸಂಘಟಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭ ರಾಜ್ಯಉಪಾಧ್ಯಕ್ಷ ರಾಧಾ ಮಾರುತಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರಾಜ್ ಕುಮಾರ್ ಅವರು ಮುಖೇಶ್ ಬಾಬು ಅವರನ್ನು ಅಭಿನಂದಿಸಿದರು.