ಪ್ರತಿನಿಧಿ ವರದಿ ಎಚ್.ಡಿ.ಕೋಟೆ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಎಚ್.ಡಿ ಕೋಟೆ ವತಿಯಿಂದ ಕ್ಯಾತನಹಳ್ಳಿ ಗ್ರಾಮದ ಬೀರೇಶ್ವರ ದೇವಸ್ಥಾನ ಆವರಣದಲ್ಲಿ ಧಾರ್ಮಿಕ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ವಲಯ ಮೇಲ್ವಿಚಾರಕಿ ವೀಣಾ ಮಾತನಾಡಿ, ಧಾರ್ಮಿಕ ಕ್ಷೇತ್ರಗಳ ಸ್ವಚ್ಛತೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ದೇವಸ್ಥಾನಗಳ ಸ್ವಚ್ಛತೆ ಮಾಡುವುದರಿಂದ ಒಳ್ಳೆಯ ವಾತಾವರಣ ಜತೆಗೆ ಶಾಂತಿ ನೆಮ್ಮದಿ ಕಾಣಬಹುದು ಎಂದರು.
ಸೇವಾಪ್ರತಿನಿಧಿ ಅನಿತಾ, ಒಕ್ಕೂಟದ ಅಧ್ಯಕ್ಷ ಕುಮಾರ್, ಗ್ರಾಮಸ್ಥರು ಉಪಸ್ಥಿತರಿದ್ದರು.