ಸಾಂಕ್ರಾಮಿಕ ರೋಗಗಳ ತಡೆಯುವುದಕ್ಕೆ ಸ್ವಚ್ಛತೆಗೆ ಪ್ರಾಮುಖ್ಯತೆ
ದೇವನಹಳ್ಳಿ: ಗ್ರಾಮಸ್ಥರಿಗೆ ಮಳೆಯಿಂದ ಉಂಟಾಗುವ ಸಾಂಕ್ರಾಮಿಕ ರೋಗಗಳನ್ನು ತಡೆಯುವ ನಿಟ್ಟಿನಲ್ಲಿ ಚರಂಡಿಗಳ ಸ್ವಚ್ಛತೆ ಮತ್ತು ಸೂಕ್ತ ಸಮಯಕ್ಕೆ ಕಸ ವಿಲೇವಾರಿ ಮಾಡಿ ಗ್ರಾಮಗಳ ನೈರ್ಮಲ್ಯ ನಿರ್ವಹಣೆ ಮಾಡುವಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕನ್ನಮಂಗಲ ಪಿಡಿಒ ಶ್ರೀನಿವಾಸ್ ಹೇಳಿದರು.
ಕನ್ನಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಚರಂಡಿ ಸ್ವಚ್ಛತೆ, ಕಸ ವಿಲೇವಾರಿ ಹಾಗೂ ಸೊಳ್ಳೆಗಳನ್ನು ನಿಯಂತ್ರಣ ಮಾಡಲು ಔಷಧಿ ಸಿಂಪಡಣೆಯನ್ನು ಮಾಡಿಸಿ ಮಾತನಾಡಿದ ಅವರು, ಯಾವುದೇ ರೀತಿಯ ರೋಗ ರೂಜಿನಗಳು ಹರಡದಂತೆ ಹಾಗೂ ನಿಯಂತ್ರಿಸುವಲ್ಲಿ ಎಲ್ಲ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡು ಗ್ರಾಮಗಳ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದರು.
ಎಲ್ಲ ಗ್ರಾಮಗಳಲ್ಲಿ ದಿನನಿತ್ಯ ಚರಂಡಿ ಸ್ವಚ್ಛತೆ, ಬ್ಲೀಚಿಂಗ್ ಪೌಡರ್, ಔಷಧ ಸಿಂಪಡಿಸುವ ಬಗ್ಗೆ ಮಾಹಿತಿ ನೀಡಲಾಗಿದೆ, ಸಿಬ್ಬಂದಿ ವರ್ಗದವರಿಗೆ ಕ್ಲೋರಿನೇಶನ್ ಕುರಿತು ಮಾರ್ಗದರ್ಶನ ನೀಡಲಾಗಿದ್ದು, ವ್ಯವಸ್ಥಿತವಾಗಿ ಎಲ್ಲ ಗ್ರಾಮಗಳಲ್ಲಿ ಹಂತ ಹಂತವಾಗಿ ಸ್ವಚ್ಛತಾ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
7ಡಿಎಚ್ಎಲ್ ಪಿ -೨
ದೇವನಹಳ್ಳಿ ತಾಲೂಕಿನ ಕನ್ನುಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒ ಶ್ರೀನಿವಾಸ್ ನೇತೃತ್ವದಲ್ಲಿ ಚರಂಡಿ ಸ್ವಚ್ಛತೆ, ಕಸ ವಿಲೇವಾರಿ ಹಾಗೂ ಸೊಳ್ಳೆಗಳನ್ನು ನಿಯಂತ್ರಣ ಮಾಡಲು ಔಷಧಿ ಸಿಂಪಡಣೆಯನ್ನು ಮಾಡಲಾಯಿತು.