ಗೋಣಿಕೊಪ್ಪ: ಮಾಯಮುಡಿ ಗ್ರಾಪಂ ವ್ಯಾಪ್ತಿಯ ಮಡಿಕೆಬೀಡು ಕೆರೆಯ ಸುತ್ತಲು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.
ಗ್ರಾಮ ಪಂಚಾಯಿತಿ, ಜೆಸಿಐ ಪೊನ್ನಂಪೇಟೆ ನಿಸರ್ಗ, ಬಸವೇಶ್ವರ ಯುವಕ ಸಂಘ ಮತ್ತು ಕಾವೇರಿ ಅಸೋಸಿಯೇಷನ್ ವತಿಯಿಂದ ತ್ಯಾಜ್ಯವನ್ನು ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು.
ಮಾಯಮುಡಿ ಗ್ರಾಪಂ ಅಧ್ಯಕ್ಷ ಅಪ್ಪಟಿರ ಟಾಟು ಮೊಣ್ಣಪ್ಪ ಮಾತನಾಡಿ, ಐತಿಹಾಸಿಕ ಹಿನ್ನೆಲೆಯ ಮಡಿಕೆಬೀಡು ಕೆರೆಯ ಸುತ್ತಮುತ್ತಲಿನಲ್ಲಿ ಮತ್ತು ಚೆನ್ನಂಗೊಲ್ಲಿ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಕಸವನ್ನು ತಂದು ಎಸೆಯಲಾಗುತ್ತಿದ್ದು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಾಲ್ಕು ಬಾರಿ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಮುಖ್ಯ ರಸ್ತೆಯ ಮೂರು ಕಡೆಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಕಸ ತಂದು ಸುರಿದವರಿಗೆ 25 ಸಾವಿರ ರೂ.ವರೆಗೆ ದಂಡ ವಿಧಿಸುವುದರ ಜತೆಗೆ ಪೊಲೀಸ್ ದೂರು ನೀಡಲಾಗುವುದೆಂದು ಎಂದು ಎಚ್ಚರಿಸಿದರು.
ಕಾವೇರಿ ಅಸೋಸಿಯೇಷನ್ ಅಧ್ಯಕ್ಷ ಟಿಪ್ಪು ಬಿದ್ದಪ್ಪ, ಜೆಸಿಐ ಪೋನ್ನಂಪೇಟೆ ನಿಸರ್ಗ ಅಧ್ಯಕ್ಷ ಪೆಮ್ಮಂಡ ಮಂಜು ಬೋಪಣ್ಣ, ಮಾಜಿ ಅಧ್ಯಕ್ಷ ಎ.ಪಿ.ದಿನೇಶ್, ನೀತ್ ಅಯ್ಯಪ್ಪ, ಬಿ.ಇ.ಕಿರಣ್, ಶರತ್ ಸೊಮಣ್ಣ, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಶಿವು, ಅಶ್ವಥ್, ಯುವಕ ಸಂಘದ ಅಧ್ಯಕ್ಷ ಶಾಂತಕುಮಾರ್ ಇದ್ದರು.
ಫೋಟೋ 26 ಎಂಡಿಕೆ 03 ; ಮಡಿಕೆಬೀಡು ಕೆರೆ ಸುತ್ತಲು ಸ್ವಚ್ಛತೆ ಕೈಗೊಂಡಿರುವುದು.