ಪ್ರತಿನಿಧಿ ವರದಿ ತಿ.ನರಸೀಪುರ
ತಾಲೂಕಿನ ಹೊಸಕುಕ್ಕೂರು ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸ್ವಚ್ಛತೆ ಅರಿವು ಕಾರ್ಯಕ್ರಮ ನಡೆಯಿತು.
ಹೊಸಕುಕ್ಕೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯ ಜಿಲ್ಲಾ ನಿರ್ದೇಶಕ ವಿಜಯಕುಮಾರ್ ನಾಗನಾಳ್ ಅವರು ತಮಟೆ ಭಾರಿಸುವ ಮೂಲಕ ಚಾಲನೆ ನೀಡಿದರು. ಅಲ್ಲದೆ ತ್ರಿವೇಣಿ ಜ್ಞಾನವಿಕಾಸ ಕೇಂದ್ರದಲ್ಲಿ ಭೀಮ ಬೆಳಕು ಕಲಾ ವೃಂದದಿಂದ ಸ್ವಚ್ಛತೆಯ ಬಗ್ಗೆ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬೀದಿ ನಾಟಕದಲ್ಲಿ ಸಾರ್ವಜನಿಕರಿಗೆ ನೈರ್ಮಲೀಕರಣದ ಬಗ್ಗೆ ತಿಳಿಸಿಕೊಡಲಾಯಿತು. ವಿವಿಧ ರೀತಿಯ ಸಾಂಕ್ರಾಮಿಕ ರೋಗಗಳು ಹರಡಲು ಕಾರಣಗಳು ಮತ್ತು ಪರಿಹಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಬಾಲ್ಯ ವಿವಾಹದಿಂದಾಗುವ ಅನಾಹುತಗಳು ಮತ್ತು ಸ್ವಚ್ಛತೆ ಬಗ್ಗೆ ಜಾಗೃತಿ ಗೀತೆಗಳು ಮತ್ತು ಕಿರುನಾಟಕಗಳ ಮೂಲಕ ಜನರಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಗ್ರಾಪಂ ಅಧ್ಯಕ್ಷ ಗೌರಮ್ಮ , ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕಾವೇರಿ, ಮೇಲ್ವಿಚಾರಕ ಲಕ್ಷ್ಮೀ, ಸೇವಾ ಪ್ರತಿನಿಧಿ ಜ್ಯೋತಿಕಲಾ, ಸುನಿತ, ಶೀಲಾ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.