ಮಂಡ್ಯ : ಲೋಕಸಮರಕ್ಕೆ ಈಗಾಗಲೇ ಮಹೂರ್ತ ಫಿಕ್ಸ್ ಆಗಿದೆ. ಈ ನಡುವೆ ಸಕ್ಕರಿನಗರಿ ಮಂಡ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮೈತ್ರಿ ಟಿಕೆಟ್ ಜೆಡಿಎಸ್ಗೆ ಫಿಕ್ಸ್ ಎನ್ನಲಾಗುತ್ತಿದೆ. ಮೈತ್ರಿ ಟಿಕೆಟ್ ಜೆಡಿಎಸ್ಗೆ ಎಂದು ಬಿಜೆಪಿ ಕೂಡ ಸ್ವಷ್ಟಪಡಿಸಿದೆ. ಆದರೆ ಅಧಿಕೃತ ಘೋಷಣೆ ಆಗಿಲ್ಲ. ಈ ಮಧ್ಯೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ಗೆ ಟಿಕೆಟ್ ಸಿಗದ ಹಿನ್ನೆಲೆ ಅವರ ಆಪ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಸದೆ ಆಪ್ತ ಹನಕೆರೆ ಶಶಿ ಮಾಧ್ಯಮದವರೊಂದಿಗೆ ಮಾತನಾಡಿ, ಟಿಕೆಟ್ ಸಿಗುವ ನಿರೀಕ್ಷೆ ಇತ್ತು. ಆದರೆ ಯಾಕೆ ಟಿಕೆಟ್ ಸಿಕ್ಕಿಲ್ಲವೋ ಗೊತ್ತಿಲ್ಲ. ಸುಮಲತಾ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಬೇಕು. ಈ ನಿಟ್ಟಿನಲ್ಲಿ ಮೂರು ದಿನಗಳಲ್ಲಿ ಸಭೆ ಮಾಡುತ್ತೇವೆ. ಅಲ್ಲಿಯೇ ಸುಮಲತಾ ಅವರೇ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.