ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣವಿರಲಿದ್ದು ಮುಂದಿನ ಎರಡು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಚನ್ನರಾಯಪಟ್ಟಣ, ತಿಪಟೂರು, ಗೋಕಾಕ್, ಬೈಲಹೊಂಗಲ, ಮೂರ್ನಾಡು, ಭಾಗಮಂಡಲ, ಸಕಲೇಶಪುರ, ಹುಣಸೂರು, ಗೋಕರ್ಣ, ಅರಕಲಗೂಡು, ತರೀಕೆರೆ, ಅಜ್ಜಂಪುರ, ಯುಗಟಿ, ಬೇಲೂರು, ಹಿರಿಯೂರು, ಕೃಷ್ಣರಾಜಪೇಟೆ, ಕೃಷ್ಣರಾಜಸಾಗರ, ಸಾಗರದಲ್ಲಿ ಮಳೆಯಾಗಿದೆ.
ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.
ರಾಜ್ಯದ ಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಬೆಳಗಿನ ಜಾವ ದಟ್ಟ ಮಂಜು ಕವಿದಿರಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇದೆ.