ಪ್ರತಿನಿಧಿ ವರದಿ ಕೆ.ಆರ್.ನಗರ
ದಕ್ಷ ಮತ್ತು ಪ್ರಾಮಾಣಿಕ ರಾಜಕಾರಣಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ದೇಶದ ಇತರ ರಾಜಕೀಯ ನಾಯಕರಿಗೆ ಮಾದರಿಯಾಗಿದ್ದಾರೆಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಹೇಳಿದರು.
ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಾಲಿಗ್ರಾಮ ಮತ್ತು ಕೆ.ಆರ್.ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಆಯೋಜಿಸಿದ್ದ ಸಿದ್ದರಾಮಯ್ಯನವರ 77ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂತಹ ಜನಪರ ನಾಯಕನನ್ನು ಪಡೆದಿರುವ ನಾವು ಧನ್ಯರು ಎಂದರು.
ತಮ್ಮ ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಎಂದು ಭ್ರಷ್ಟಾಚಾರ ಮತ್ತು ಸ್ವ-ಜನ ಪಕ್ಷಪಾತದ ಸೋಂಕು ಹಚ್ಚಿಕೊಳ್ಳದ ಅವರು ಸಮಾಜದಲ್ಲಿ ನೊಂದವರು, ಹಿಂದುಳಿದವರು ಮತ್ತು ದೀನ ದಲಿತರ ಏಳಿಗೆಗೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದು, ಅಂತಹ ನಾಯಕರನ್ನು ನಾವು ಸದಾ ಬೆಂಬಲಿಸಬೇಕು ಎಂದು ತಿಳಿಸಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ಜಿಪಂ ಮಾಜಿ ಸದಸ್ಯ ಜಿ.ಆರ್.ರಾಮೇಗೌಡ, ತಾಪಂ ಮಾಜಿ ಸದಸ್ಯ ಗೋವಿಂದೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್ ಜಾಬೀರ್, ಯೋಜನಾ ಪ್ರಾಧಿಕಾರದ ನಿರ್ದೇಶಕಿ ಸರಿತಾಜವರಪ್ಪ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಪ್ರದೀಪ್ಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ಅಡಗೂರು ಗ್ರಾಪಂ ಅಧ್ಯಕ್ಷ ಮಹದೇವ್, ಮುಖಂಡರಾದ ಕೆ.ಪಿ.ಜಗದೀಶ್, ದಿಡ್ಡಹಳ್ಳಿಬಸವರಾಜು, ರಾಜನಾಯಕ, ನವೀದ್, ಹೊಸಕೋಟೆಚೆಲುವರಾಜು, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಬಿ.ಜೆ.ನವೀನ್ಕುಮಾರ್ ಮತ್ತಿತರರು ಹಾಜರಿದ್ದರು.
13 ಕೆಆರ್ ಎನ್-1,2:- ಕೆ.ಆರ್.ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹುಟ್ಟು ಹಬ್ಬದ ಅಂಗವಾಗಿ ಕೆಪಿಸಿಸಿ ಕಾರ್ಯಕಾರಣಿ ಸದಸ್ಯ ದೊಡ್ಡಸ್ವಾಮೇಗೌಡ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.