ಸಿಎಮ್ ಸಿದ್ದರಾಮಯ್ಯ ಅವರ ಕಾಲ್ಗುಣ ಸರಿ ಇಲ್ಲ,ಅವರು ಅಧಿಕಾರಕ್ಕೆ ಬಂದರೆ ಮಳೆ ಬರುವುದಿಲ್ಲ ಎನ್ನುತ್ತಿದ್ದರು. ಆದರೆ ಈಗ ಏನಾಗಿದೆ ನೋಡಿ ಎಂದು ಡಿಸಿಎಮ್ ಡಿಕೆ ಶಿವಕುಮಾರ್ ವಿಪಕ್ಷಗಳಿಗೆ ಟಾಂಗ್ ನಡೆಸಿದ್ದಾರೆ.
ಕೆ ಆರ್ ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು,ಈ ಹಿನ್ನೆಲೆಯಲ್ಲಿ ಕನ್ನಂಬಾಡಿಗೆ ಬಾಗಿನ ಅರ್ಪಿಸಲು ಮೈಸೂರಿಗೆ ಆಗಮಿಸಿರುವ ಡಿಸಿಎಮ್ ಡಿಕೆ ಶಿವಕುಮಾರ್ ಈ ಬಾರಿ ಎಲ್ಲಾ ಜಲಾಶಯಗಳು ಭರ್ತಿಯಾಗಿದೆ ಅಲ್ಲದೆ ತಮಿಳುನಾಡಿಗೆ ಅಗತ್ಯಗಿಂತಲೂ ಹೆಚ್ಚು ನೀರು ಹರಿದು ಹೋಗ್ತಿದೆ.ತಮಿಳುನಾಡು ಮತ್ತು ಕರ್ನಾಟಕ ರಾಜ್ಯದ ಜನರು ಸಂತೋಷವಾಗಿದ್ದಾರೆ ಅಲ್ಲದೆ ಎರಡು ರಾಜ್ಯಗಳ ಕೆರೆ ಕಟ್ಟೆಗಳು ತುಂಬಿವೆ. ಆದರೆ ಈ ಹಿಂದೆ ಸಿದ್ಧರಾಮಯ್ಯ ಅವರು ಅಧಿಕಾರಕ್ಕೆ ಬಂದರೆ ಮಳೆಯಾಗುವುದಿಲ್ಲ,ಸಿದ್ಧರಾಮಯ್ಯ ಅವರ ಕಾಲ್ಗುಣ ಸರಿ ಇಲ್ಲ ಎಂದು ಟೀಕಿಸುತ್ತಿದ್ದವರೆಲ್ಲ ಎಲ್ಲಿದ್ದಾರೆ ಎಂದು ವಿಪಕ್ಷಗಳಿಗೆ ಪ್ರಶ್ನಿಸಿದ್ದಾರೆ.ಹಾಗೂ ಇಂದು ಬಾಗಿನ ಅರ್ಪಣೆ ಮಾಡುತ್ತಿದ್ದೇವೆ,ಶುಭಕಾರ್ಯದ ವೇಳೆ ರಾಜಕೀಯ ಮಾತನಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನಲ್ಲಿ ಇಂದು ಹೇಳಿದ್ದಾರೆ.
Leave a comment