ರಾಜ್ಯದಲ್ಲಿ ಉತ್ತಮ ಮಳೆಬೆಳೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥನೆ ಮಾಡಿಕೊಂಡರು. ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಭಾಗವಹಿಸುವ ಮುನ್ನಾ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿ, ಮಳೆಗಾಗಿ ಮಾದಪ್ಪನ ಬಳಿ ದೇವರಲ್ಲಿ ಪ್ರಾರ್ಥಿಸಿರುವೆ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮಳೆಗಾಗಿ ಮೊರೆ ಹೋಗಿರುವೆ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿರುವೆ ಮಾದಪ್ಪನ ಮೇಲೆ ನನಗೆ ನಂಬಿಕೆ ಇದೆ. ಉತ್ತಮ ಮಳೆ ಬೀಳುವ ನೀರೀಕ್ಷೆ ಇದೆ ಎಂದ ಅವರು ತಿಳಿಸಿದರು. ಸಚಿವರಾದ ಕೆ.ವೆಂಕಟೇಶ್, ಎಚ್.ಸಿ.ಮಹದೇವಪ್ಪ ಜೊತೆಗೂಡಿ ಬಂದ ಸಿದ್ದರಾಮಯ್ಯ ಮಾದಪ್ಪನಬೆಟ್ಟದಲ್ಲಿ ಬೆಳ್ಳಿ ದಂಡ ಹಿಡಿದು ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿದರು. ಬೆಳ್ಳಿರಥ ಸೇವೆ ನಡೆಸಿದರು.