ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ದಸರಾ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನಟ ಡಾರ್ಲಿಂಗ್ ಕೃಷ್ಣ, ನಟಿ ಮಿಲನ ನಾಗರಾಜ್, ನಟಿ ಹರ್ಷಿಕ ಪೂನಚ್ಚ, ಮಯೂರಿ, ಸುಧಾ ನರಸಿಂಹರಾಜು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಹರೀಶ್ ಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದಾರೆ.