ಮೈಸೂರು: ಇದು ದುಷ್ಟ ಸಂಹಾರ ಶಿಷ್ಟ ರಕ್ಷಣೆ ಮಾಡುವಂತ ಹಬ್ಬ.ಈ ಬಾರಿ ಉತ್ತಮ ಮಳೆ ಬೆಳೆಯಾಗಿದೆ ಸಮೃದ್ಧ ಮಳೆ ಕಾರಣ ಅಣೆಕಟ್ಟು ತುಂಬಿವೆ. ಈ ಸಂತಸದಲ್ಲಿ ನಾಡ ಹಬ್ಬ ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಅದ್ದೂರಿತನ ಎಲ್ಲರಿಗೂ ಸಂತದ ತಂದಿದೆ ಅಲ್ಲವೇ.? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರು ದಸರಾ ಜಂಬೂಸವಾರಿ ನಂದಿಧ್ವಜ ಪೂಜೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಮೂರ್ಖರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವುದಿಲ್ಲ ಎಂದಿದ್ದವರಿಗೆ ತಿರುಗೇಟು ನೀಡಿದ್ದಾರೆ.
ವಿಜಯನಗರ ಸಾಮ್ರಾಜ್ಯದಲ್ಲಿ ಆರಂಭವಾದ ದಸರಾ ಮೈದಾನದಲ್ಲಿ ರಾಜ ಒಡೆಯರಿಂದ ಆರಂಭವಾಯಿತು. ಚಾಮುಂಡಿ ಬೆಟ್ಟದಲ್ಲಿ ದಸರಾಗೆ ಚಾಲನೆ ನೀಡಲಾಯಿತು. ಈಗ ಸಂತೋಷದಿಂದ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುತ್ತಿದ್ದೇನೆ ಎಂದು ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.