ವಿಶ್ವಾದ್ಯಂತ ವಿಶ್ವ ಮೀನುಗಾರಿಕೆ ದಿನಾಚರಣೆ ಆಚರಣೆ ಮಾಡುತ್ತಿದ್ದೇವೆ. ಎಲ್ಲ ಒಳನಾಡು ಹಾಗೂ ಕರಾವಳಿ ಮೀನುಗಾರರಿಗೆ ಮತ್ತು ಮಾರಾಟಗಾರರಿಗೆ ಸಂಸ್ಕರಣ ಮಾಡುತ್ತಿರುವವರಿಗೂ ಸಿಎಂ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದರು. 1987 ರಿಂದ ಮೀನುಗಾರರ ದಿನಾಚರಣೆ ಆರಂಭ ಆಯ್ತು, ಮೀನುಗಾರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಪರಿಹಾರ ಸಿಗಬೇಕು. ಸಚಿವ ಮಂಕಾಳ ವೈದ್ಯ ಅವರು ಆ ಜವಾಬ್ದಾರಿ ತಗೊಂಡಿದ್ದಾರೆ ಎಂದರು.