ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ಈಗಾಗಲೇ ಹೇಳಿದ್ದೇನೆ, ರಾಜೀನಾಮೆ ಕೊಟ್ಟು ತನಿಖೆ ಮಾಡಿಸಿ ಅಂತ ಸಿಎಂ ರಾಜೀನಾಮೆ ಕೊಟ್ಟು ತನಿಖೆ ಮಾಡಿಸುವುದು ಸೂಕ್ತ ಎಂದು ಸಂಸದ ಯದುವೀರ್ ಒಡೆಯರ್ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ದಿನಗಣನೆ ಎಂದು ಬಿ ವೈ ವಿಜಯೇಂದ್ರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ಈಗಾಗಲೇ ಹೇಳಿದ್ದೇನೆ, ರಾಜೀನಾಮೆ ಕೊಟ್ಟು ತನಿಖೆ ಮಾಡಿಸಿ ಅಂತ ಸಿಎಂ ರಾಜೀನಾಮೆ ಕೊಟ್ಟು ತನಿಖೆ ಮಾಡಿಸುವುದು ಸೂಕ್ತ ಎಂದು ಹೇಳಿದ್ದಾರೆ.
ಇದೇ ವೇಳೆ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡುತ್ತರುವ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಗೃಹ ಸಚಿವರನ್ನು ಕೇಳಬೇಕು ಆರೋಪಿ ಯಾರೇ ಆಗಿದ್ದರೂ ಜೈಲಿನ ಪ್ರಕ್ರಿಯೆಯನ್ನು ಪಾಲಿಸಬೇಕು. ಜೈಲಿನಲ್ಲಿ ಯಾವ ರೀತಿ ಶಿಸ್ತು ಇದೆಯೋ ಅದರಂತೆ ಎಲ್ಲರೂ ನಡೆಯಬೇಕು. ಜೈಲಿನ ರೂಲ್ಸ್ ನಂತೆ ಎಲ್ಲರನ್ನು ಒಂದೇ ರೀತಿ ನೋಡಬೇಕು ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.