ವಿಶ್ವ ವಿಖ್ಯಾತ ನಾಡಹಬ್ಬ ದಸರಾದ ಯುವ ದಸರಾ ಅಂಗವಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ ಹಾಗೂ ಎಂಐಟಿ ಕಾಲೇಜು ಸಹಯೋಗದಲ್ಲಿ ತಾಲೂಕಿನ ತಾಂಡವಪುರ ಗ್ರಾಮದ ಬಳಿ ಇರುವ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ 2024ರ ಕೋಕೋ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು.
ಕಾಲೇಜಿನ ಪ್ರಾಂಶುಪಾಲ ವೈ.ಟಿ.ಕೃಷ್ಣೇಗೌಡ ಪಂದ್ಯಾವಳಿಯನ್ನು ಉದ್ಘಾಟಿಸಿದರು.
ಡಾ.ಮುರುಳಿಧರನ್ ಮಾತನಾಡಿ, ಕ್ರೀಡಾಪಟುಗಳಲ್ಲಿ ಕ್ರೀಡಾ ಮನೋಭಾವನೆ ಇರಬೇಕು. ಸೋಲು-ಗೇಲ್ಲುವನ್ನ ಸಮನಾಗಿ ಸ್ವೀಕರಿಸಬೇಕು. ಗೆದ್ದವರು ಖುಷಿಯಾಗಿ ಸೋತವರು ದುಃಖದಿಂದ ಇರಬಾರದು. ಇಂದು ಸೋತವರು ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಗೆದ್ದೆ ಗೆಲ್ಲುತ್ತಾರೆ. ದೈಹಿಕ, ಮಾನಸಿಕ ಹಾಗೂ ದೇಹದ ಸಮತೋಲನೆಗೆ ಕ್ರೀಡೆ ಬಹಳ ಮುಖ್ಯ ಎಂದು ಹೇಳಿದರು.
ಡಾ.ಮುರುಳಿಧರ್, ಡಾ.ಚೇತನ್, ಡಾ.ರಕ್ಷಿತ್, ಆಲ್ವಿನ್ ಸೇರಿದಂತೆ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಇದ್ದರು.