ಮಂಡ್ಯ: ಇಂದಿನಿಂದ ಕಾವೇರಿ ಹೋರಾಟ ಮತಷ್ಟು ತೀವ್ರಗೊಳ್ಳಲಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು-ಕಾಲೇಜು ವಿದ್ಯಾರ್ಥಿಗಳ ಬೆಂಬಲ ನೀಡಲಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಹಿನ್ನೆಲೆ ಕಳೆದ 47 ದಿನಗಳಿಂದ ನಿರಂತರವಾಗಿ ರೈತ ಹಿತರಕ್ಷಣಾ ಸಮಿತಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಧರಣಿ ನಡೆಸುತ್ತಿದೆ. ಇಂದಿನಿಂದ ಹೋರಾಟ ತೀವ್ರಗೊಳಿಸಲು ರೈತ ಹಿತರಕ್ಷಣಾ ಸಮಿತಿ ನಿರ್ಧಾರ ಮಾಡಿದೆ.