PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜೀವದೊಂದಿಗೆ ಚೆಲ್ಲಾಟ; 1,434ಕ್ಕೂ ಹೆಚ್ಚು ನಕಲಿ ವೈದ್ಯರ ವಿರುದ್ಧ ದೂರು ದಾಖಲು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಅಂಕಣ > ಭಾರತ ತಿಳಿ > ಜೀವದೊಂದಿಗೆ ಚೆಲ್ಲಾಟ; 1,434ಕ್ಕೂ ಹೆಚ್ಚು ನಕಲಿ ವೈದ್ಯರ ವಿರುದ್ಧ ದೂರು ದಾಖಲು
ಅಂಕಣಭಾರತ ತಿಳಿಸಂಪಾದಕೀಯಸಮಗ್ರಸಹಕಾರ ನೋಟ

ಜೀವದೊಂದಿಗೆ ಚೆಲ್ಲಾಟ; 1,434ಕ್ಕೂ ಹೆಚ್ಚು ನಕಲಿ ವೈದ್ಯರ ವಿರುದ್ಧ ದೂರು ದಾಖಲು

Prathinidhi News
Last updated: December 11, 2023 2:34 pm
Prathinidhi News
Published December 11, 2023
Share
SHARE

ರಾಜ್ಯದಲ್ಲಿ ಮತ್ತೆ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಎಂಬಿಬಿಎಸ್‌ ಪದವಿ ಮುಗಿಸದೇ, ಸ್ಟೆತಸ್ಕೋಪ್‌‌ ಕೊರಳಿಗೆ ಹಾಕಿಕೊಂಡು ಕ್ಲಿನಿಕ್‌ ನಡೆಸುತ್ತಿರುವ ಹಲವು ನಕಲಿ ವೈದ್ಯರ ಬಗ್ಗೆ ದೂರುಗಳು ದಾಖಲಾಗುತ್ತಿವೆ. ಈ ಹಿನ್ನೆಲೆ, ಕ್ರಮ ಕೈಗೊಂಡಿರುವ ಆರೋಗ್ಯ ಇಲಾಖೆ 1,434ಕ್ಕೂ ಹೆಚ್ಚು ನಕಲಿ ವೈದ್ಯರ ಮೇಲೆ ಪ್ರಕರಣ ದಾಖಲು ಮಾಡಿದೆ.

 

 

ವ್ಯಕ್ತಿಯೊಬ್ಬರ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಆದರೆ, ಕೆಲವರು ಹಣದ ಆಸೆ ಸೇರಿದಂತೆ ನಾನಾ ಕಾರಣಗಳಿಂದ ನಕಲಿ ವೈದ್ಯರ ವೇಷ ಧರಿಸಿ ಜನರ ಜೀವದ ಜತೆಗೆ ಆಟವಾಡುತ್ತಿದ್ದಾರೆ. ವಿದ್ಯೆ ಕಲಿಯದೇ ಸರ್ಜರಿ ಮಾಡಲು ಪ್ರಯತ್ನಿಸುವ ಈ ನಕಲಿ ವೈದ್ಯರು ಹಲವರ ಸಾವಿಗೆ ಕಾರಣವಾಗಿದ್ದಾರೆ. ಇಂತಹ ನಕಲಿ ವೈದ್ಯರ ಪ್ರಕರಣಗಳು ಈ ಹಿಂದೆಯೂ ರಾಜ್ಯದಲ್ಲಿ ಪತ್ತೆಯಾಗಿದ್ದವು. ಇದೀಗ, ಮತ್ತೆ ರಾಜ್ಯದಲ್ಲಿ ದಾಪುಗಾಲಿಟ್ಟಿರುವ ಈ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ.

ಇನ್ನು ಕೊರೊನಾ ಸಮಯದಲ್ಲಿ ಕೆಲವರು ಕೆಲಸ ಇಲ್ಲದೇ, ಜೀವನ ನಡೆಸಲು ಅನ್ಯ ಮಾರ್ಗಗಳನ್ನು ಹಿಡಿದಿದ್ದಾರೆ. ಈ ಪೈಕಿ ಎಂಬಿಬಿಎಸ್‌ ಪದವಿ ಮುಗಿಸದೇ ಇದ್ದರೂ, ಹಲವು ಜನ ಹಳ್ಳಿಗಳಲ್ಲಿ, ನಗರ ಪ್ರದೇಶಗಳಲ್ಲಿ ಹಾಗೂ ಗಡಿ ಭಾಗದಲ್ಲಿ ಹೆಚ್ಚಾಗಿ ಕ್ಲಿನಿಕ್‌ ತೆರೆದು ಜನರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 1,500ಕ್ಕೂ ಹೆಚ್ಚು ನಕಲಿ ವೈದ್ಯರಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದ್ದು, ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ಸದ್ಯ 1,434ಕ್ಕೂ ಹೆಚ್ಚು ನಕಲಿ ವೈದ್ಯರ ಮೇಲೆ ಆರೋಗ್ಯ ಇಲಾಖೆ ಪ್ರಕರಣ ದಾಖಲಿಸಿದೆ.

- ಜಾಹೀರಾತು -

ಹೊರ ರಾಜ್ಯಗಳಿಂದ ಬರುತ್ತಿರುವ ನಕಲಿ ವೈದ್ಯರು ಹೊಸೂರು, ಆನೇಕಲ್ ಹಾಗೂ ಜಿಲ್ಲೆಗಳ ಗಡಿ ಭಾಗಗಳಲ್ಲಿ ಮೊಬೈಲ್ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಿ ಜನರ ಪ್ರಾಣಕ್ಕೆ ಅಪಾಯ ತರುತ್ತಿದ್ದಾರೆ.

ವೈದ್ಯರ ಪ್ರಮಾಣ ಪತ್ರ ಹಾಗೂ ಆಸ್ಪತ್ರೆಗಳ ಪ್ರಮಾಣಿಕೃತ ಪತ್ರ ನೋಡದೆ ಚಿಕಿತ್ಸೆ ಪಡೆದು ಸಮಸ್ಯೆಗೆ ಒಳಗಾಗಬೇಡಿ. ಸಾರ್ವಜನಿಕರು ನೋಂದಾಯಿತ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 300ಕ್ಕೂ ಹೆಚ್ಚು ನಕಲಿ ವೈದ್ಯರು ಇರುವ ಬಗ್ಗೆ ಮಾಹಿತಿ ಇದ್ದು, ಡಿಸೆಂಬರ್ ಕೊನೆಯ ವೇಳೆಗೆ ನಕಲಿ ವೈದ್ಯರು ಹಾಗೂ ಕ್ಲಿನಿಕ್‌ಗೆ ಬೀಗ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.

ಇಷ್ಟು ದೊಡ್ಡ ಸಂಖ್ಯೆಯಲ್ಲಿ ನಕಲಿ ವೈದ್ಯರು ಹುಟ್ಟಿಕೊಳ್ಳಲು ಇಲಾಖೆಯ ಕೆಲ ಹಿರಿಯ ಅಧಿಕಾರಿಗಳು ಸಹಕರಿಸಿದ್ದಾರೆ ಎಂಬ ಆರೋಪವಿದೆ. ಅಲೋಪಥಿ, ನ್ಯಾಚುರೋಪಥಿ, ಆಯುರ್ವೆದ ಹಾಗೂ ಹೋಮಿಯೋಪಥಿ ಹೆಸರಿನಲ್ಲಿ ದಂಧೆ ನಡೆಸುತ್ತಿರುವ ನಕಲಿ ವೈದ್ಯರ ಪಟ್ಟಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.

ಬೀದರ್​ನಲ್ಲಿ ಅತಿ ಹೆಚ್ಚು 423 ನಕಲಿ ವೈದ್ಯರು ಸಿಕ್ಕಿಬಿದ್ದಿದ್ದು, ಕೋಲಾರನಲ್ಲಿ 179 ನಕಲಿ ವೈದ್ಯರು ಸಿಕ್ಕಿಬಿದ್ದಿದ್ದಾರೆ. ಬೆಳಗಾವಿಯಲ್ಲಿ 170, ಕಲಬುರಗಿಯಲ್ಲಿ 82 ನಕಲಿ ವೈದ್ಯರು ಸಿಕ್ಕಿಬಿದ್ದಿದ್ದಾರೆ. ಇಂತಹ ನಕಲಿ ವೈದ್ಯರ ಕ್ಲಿನಿಕ್​ಗಳಲ್ಲಿ ಚಿಕಿತ್ಸೆ ಪಡೆದಿರುವ ಸಾಕಷ್ಟು ರೋಗಿಗಳು ಪ್ರಾಣ ಕಳೆದುಕೊಂಡಿರುವ ಉದಾಹರಣೆಗಳಿವೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಬಾಳುಗೋಡು: ಯುವಕ ನೀರು ಪಾಲು

March 20, 2024
ಸಮಗ್ರ

ಬಾನಂದೂರಿನಿಂದ ಚುಂಚನಗಿರಿಗೆ ಬಸ್ ಸೌಲಭ್ಯ

June 13, 2024
ಚುನಾವಣೆಮುಖಪುಟಸಮಗ್ರ

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ​ ಸೋಲಿಗೆ ಕಾರಣ ಕೊಟ್ಟ ಸತೀಶ್ ಜಾರಕಿಹೊಳಿ

June 5, 2024
ಸಮಗ್ರ

ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರತ ಕೋಲಾರದ ಬಿಎಸ್​ಎಫ್​ ಯೋಧ ಅನಾರೋಗ್ಯದಿಂದ ನಿಧನ

December 17, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?