ಬೆಳಗಾವಿ: ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ವಿಧಾನಸಭೆ ಸ್ಪೀಕರ್ಗೆ ಕಾಂಗ್ರೆಸ್ ವಕ್ತಾರ ಸಿದ್ದರಾಜು ಎಂಬವವರು ದೂರು ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆ ಆದಂತೆ ಕರ್ನಾಟಕದಲ್ಲೂ ಆಗಲಿದೆ. ಸರ್ಕಾರ ಉರುಳಲಿದೆ ಎಂದಿದ್ದ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ವಿರೋಧಿಸಿ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು ಸಲ್ಲಿಸಿದ್ದಾರೆ.