ಪ್ರತಿನಿಧಿ ವರದಿ ತುಮಕೂರು
ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಕೇವಲ ಕರುನಾಡ ಆಸ್ತಿಯಲ್ಲ. ಅವರು ನಮ್ಮ ದೇಶದ ಆಸ್ತಿ. ಈ ಕರುನಾಡು ದೇಶಕ್ಕೆ ಕೊಟ್ಟಂತ ಹೆಮ್ಮೆಯ ಪ್ರಧಾನಿ, ಹೆಮ್ಮೆಯ ಕನ್ನಡಿಗ, ನಮ್ಮ ಮಣ್ಣಿನ ಮಗ ದೇವೇಗೌಡ ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಮನವಿಸಲಿಸಲಾಗಿದೆ.
ದೇಶದ ಯಾವ ಪ್ರಜೆಯಾಗಲೀ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡುವುದು ಒಳ್ಳೆಯದಲ್ಲ. ಈಗಿನ ನಾಯಕರಿಗೆ ಮಾರ್ಗದರ್ಶಿ ಹಾಗೂ ರಾಜಕೀಯ ಗುರುಗಳಾಗಿದ್ದಾರೆ. ನಡೆದ ಬಂದ ದಾರಿಯನ್ನು ಯಾವ ನಾಯಕರೂ ಮರೆಯಬಾರದು. ಹಿರಿಜೀವಕ್ಕೆ ಮಾನಸಿಕವಾಗಿ ಹೆಚ್ಚು ನೋವು ಕೊಡುವುದು ಒಳ್ಳೆಯದಲ್ಲ ಎಂದು ಜೆಡಿಎಸ್ ಮತ್ತು ಬಿಜೆಪಿನಾಯಕರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ನಿನ್ನೆ ರಾತ್ರಿ ತುಮಕೂರಿನಲ್ಲಿ ಮಾಜಿ ಪ್ರಧಾನಿಗಳಾದ ದೇವೆಗೌಡ ಸಭೆಯಲ್ಲಿ ದಾಳಿಗೆ ಯತ್ನಿಸಿದ್ದಾರೆ ಎಂದು ಮುಖಂಡರು ಆರೋಪಿಸಿದರು. ಜಿಲ್ಲಾ ಪೊಲೀಸ್ ಹಾಗೂ ಆಡಳಿತ ಅಧಿಕಾರಿಗಳ ನಿರ್ಲಕ್ಷೆ ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಪ್ರಚೋದನಕಾರಿ ಹೇಳಿಕೆಯಿಂದ ಕುಂಚಿಟಿಗ ಸಮುದಾಯ ಭವನದಲ್ಲಿ ಈಘಟನೆ ನಡೆದಿದ್ದೆ. ಘಟನೆಗೆ ಸಂಬಂಧಪಟ್ಟಂತೆ ಇಂದು ಮಾಜಿ ಸಚಿವರಾದ ಸುರೇಶ್ ಕುಮಾರ್ ನೇತೃತ್ವದಲ್ಲಿ ಹಾಗೂ ಬಿಜೆಪಿ- ಜೆಡಿಎಸ್ ಕಾನೂನು ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಇದಕ್ಕೆ ಕಾರಣಕರ್ತರಾದ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಪಕ್ಷದ ಕಾನೂನು ಘಟಕದ ರಾಜ್ಯಾಧ್ಯಕ್ಷರಾದ ಎ.ಪಿ ರಂಗನಾಥ್ ಅವರು ಮನವಿ ಸಲ್ಲಿಸಿದರು.
ಪ್ರತಿಭಟನೆ ನಡೆಸುವ ಹಕ್ಕು ಇಲ್ಲವೆ ಡಾ.ಜಿ ಪರಮೇಶ್ವರ್: ಕಾಂಗ್ರೆಸ್ ಮಹಿಳಾ ಕಾರ್ಯ ಕರ್ತರು ನೆನ್ನೆ ರಾತ್ರಿ ಮಾಜಿ ಪ್ರಧಾನಿ ದೇವೇಹೌಡರ ಸಭೆಗೆ ಹೋಗಿ ಪ್ರತಿಭಟನೆ ನಡೆಸಿದ್ದಾರೆ. ಯಾಕೆ ನಡೆಸಿದರು ? ಮಹಿಳೆಯರ ಬಗ್ಗೆ ಕುಮಾರಸ್ವಾಮಿ ಲಘವಾಗಿ ಮಾತನಾಡಿದ್ದಕ್ಕೆ, ಪ್ರಜಾಪ್ರಭುತ್ವದಲ್ಲಿ ನಾಗರಿಕರಿಗೆ ಅನ್ಯಾಯದ ವಿರುದ್ಧ ಪ್ರತಿಭಟಿಸುವ ಹಕ್ಕು ಇಲ್ಲವೆ, ಪ್ರತಿಭಟನೆ ನಡೆಸುತ್ತಿದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನಿಯ ಎಂದು ಪರಮೇಶ್ವರ್ ಹೇಳಿದ್ದಾರೆ.