ಕ್ರಿಕೆಟ್ ಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ತಹಸೀಲ್ದಾರ್
ಬೆಟ್ಟದಪುರ: ಕ್ರಿಕೆಟ್ ಆಟ ಆಡುತ್ತಿದ್ದ ಯುವಕರಿಗೆ ತಹಸೀಲ್ದಾರ್ ಸುರೇಂದ್ರ ಮೂರ್ತಿ ಅವರು ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ ಕಡ್ಡಾಯ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.
ಪಿರಿಯಾಪಟ್ಟಣ ತಾಲೂಕಿನ ಬೆಕ್ಕರೆ ಗ್ರಾಮದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಮ ದೇವತೆ ಶ್ರೀ ಬಾಲಚಂದ್ರ ಬಸವೇಶ್ವರ ಸ್ವಾಮಿ ಆಶೀರ್ವಾದದೊಂದಿಗೆ ಗ್ರಾಮಸ್ಥರ ಸಹಕಾರದೊಂದಿಗೆ ನಡೆಯುತ್ತಿದ್ದ ಬಿಪಿಎಲ್ ಸೀಸನ್ -1 ಕ್ರಿಕೆಟ್ ಟೂರ್ನಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಮಾತನಾಡಿದರು.
ಯುವ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ದೇಶ ಕಟ್ಟುವ ಕಾರ್ಯ ಮಾಡಬೇಕು. ಯುವಕರು ಪ್ರಜಾಪ್ರಭುತ್ವದಲ್ಲಿ ಮತದಾನದ ಮೌಲ್ಯವನ್ನು ಅರಿತುಕೊಳ್ಳಬೇಕು. ಒಂದೊಂದು ಮತಕ್ಕೂ ಬೆಲೆಯಿದೆ, ಒಂದು ಸದೃಢ ದೇಶ ಕಟ್ಟುವ ನಿಟ್ಟಿನಲ್ಲಿ ಮತದಾನ ಪ್ರಮುಖ ಪಾತ್ರ ವಹಿಸುವುದರಿಂದ ಯಾವುದೇ ಆಮಿಷಕ್ಕೆ ಒಳಗಾಗದೇ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಯುವಕರು ತಪ್ಪದೇ ಮತದಾನ ಮಾಡಿ ಜತೆಗೆ ತಮ್ಮ ಕುಟುಂಬದ ಹಾಗೂ ಸುತ್ತಮುತ್ತಲಿನ ಜನರನ್ನು ಕೂಡ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು ಎಂದರು. ಕ್ರೀಡಾಕೂಟಗಳಲ್ಲಿ ಭಾಗವಹಿಸುವವರು ಕ್ರೀಡಾ ಸ್ಪೂರ್ತಿಯನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಲು ಕರೆ ನೀಡಿದರು.
ಭುವನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ದೇವರಾಜೇಗೌಡ, ಗ್ರಾಮ ಲೆಕ್ಕಿಗರಾದ ನವೀನ್ ರಾವ್, ದೀಪಕ್, ಗ್ರಾಪಂ ಸಿಬ್ಬಂದಿಗಳಾದ ಸತ್ಯನಾರಾಯಣ್, ರಾಜು ಮತ್ತು ಬೆಕ್ಕರೆ ಗ್ರಾಮಸ್ಥರು ಇದ್ದರು.
08ಬಿಟಿಪಿ02: ಬೆಕ್ಕರೆ ಗ್ರಾಮದಲ್ಲಿ ನಡೆಯುತ್ತಿದ್ದ ಬಿಪಿಎಲ್ ಸೀಸನ್ -1 ಕ್ರಿಕೆಟ್ ಟೂರ್ನಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಸುರೇಂದ್ರ ಮೂರ್ತಿ ಭೇಟಿ ನೀಡಿ, ಮತದಾನ ಬಗ್ಗೆ ಅರಿವು ಮೂಡಿಸಿದರು.