ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮೈಸೂರಿನ ವಿವಿದೆಡೆ ಪ್ರತಿಭಟನೆಯನ್ನ ಮಾಡಲಾಗಿದೆ. ಭಾರತದ ಜೊತೆ ಹೆಚ್ಚು ಗಡಿಯನ್ನು ಹಂಚಿಕೊಂಡಿರುವ ಬಾಂಗ್ಲಾದೇಶ ರಾಜಕೀಯ ಅರಾಜಕತೆಯನ್ನ ಎದುರಿಸುತ್ತಿದೆ. ಈ ಹಿನ್ನೆಲೆ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗುತ್ತಿದ್ದು, ನಗರದ ವಿವಿಧೆಡೆ ಪ್ರತಿಭಟನೆಯನ್ನ ನಡೆಸಲಾಗುತ್ತಿದೆ.
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಮೌನ ಪ್ರತಿಭಟನೆಯನ್ನು ಮಾಡುವ ಮೂಲಕ ಬಾಂಗ್ಲಾ ದೇಶದ ಹಿಂದೂಗಳ ಜೊತೆ ನಾವಿದ್ದೇವೆ ಎಂದು ಧೈರ್ಯವನ್ನು ತುಂಬಿದ್ದಾರೆ.
ಮೈಸೂರು ನಗರ ಬಸ್ ನಿಲ್ದಾಣದ ಬಳಿ ಬಿಜೆಪಿ ಶಾಸಕ ಶ್ರೀವತ್ಸ ಮೌನ ಪ್ರತಿಭಟನೆಯನ್ನು ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿನ ಹಿಂದೂಗಳ ಜೊತೆ ನಾವಿದ್ದೇವೆ ಎಂಬ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಶಾಸಕ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನ ಖಂಡಿಸಿದ್ದಾರೆ. ಶಾಸಕ ಶ್ರೀವತ್ಸ ಗೆ ಸ್ಥಳೀಯ ಬಿಜೆಪಿ ಮುಖಂಡರು, ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಸಾಥ್ ನೀಡಿದ್ದಾರೆ.
ಮತ್ತೊಂದೆಡೆ ಹಿಂದೂಗಳ ಮೇಲೆ ದಾಳಿ ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ಮೈಸೂರು ನಗರದ ಹಲವಾರು ವೃತ್ತಗಳಲ್ಲಿ ಮೌನ ಪ್ರತಿಭಟನೆ ನಡೆಸಿದೆ. ನಗರದ ಚಾಮುಂಡಿಪುರಂ ವೃತ್ತ, ವೇದಾಂತ ಹೆಮ್ಮಿಗೆ ವೃತ್ತ, ರಾಮಸ್ವಾಮಿ ವೃತ್ತ, ಗನ್ ಹೌಸ್ ವೃತ್ತ, ನ್ಯಾಯಾಲಯದ ಮುಂಭಾಗ,ಸೇರಿದಂತೆ ನಗರದ ಪ್ರಮುಖ 30 ವೃತಗಳಲ್ಲಿ ಬಿತ್ತಿ ಪತ್ರ ಪ್ರದರ್ಶಿಸಿ ಮೌನವಾಗಿ ಪ್ರತಿಭಟಿಸಲಾಯಿತು.
ಪ್ರತಿಭಟನೆಯಲ್ಲಿ ಸಮಿತಿಯ ಸಂಚಾಲಕರಾದ ಮಹೇಶ್, ರಂಗಸ್ವಾಮಿ, ಗಿರೀಶ್, ಸಂತೋಷ್, ವಿಕ್ರಂ ಅಯ್ಯಂಗಾರ್, ಚಂದ್ರು ಕುಮಾರ್, ಬೈರತಿ ಲಿಂಗರಾಜು, ಶ್ರೀನಿವಾಸ್, ಎಸ್ ಎನ್ ರಾಜೇಶ್, ಸೇರಿದಂತೆ ಇನ್ನಿತರ ಹಿಂದು ಮುಖಂಡರುಗಳು ಭಾಗವಹಿಸಿದ್ದರು.