ಮಂಡ್ಯ: ಕಾವೇರಿ ನೀರನ್ನು ಪಡೆಯುವಲ್ಲಿ ಕಾಂಗ್ರೆಸ್ ಸರ್ಕಾರ ಮೈಮರೆತಿದೆ. ಸರ್ಕಾರಕ್ಕೆ ಕುಡಿಯುವ ನೀರು ವ್ಯವಸ್ಥೆ ಮಾಡಲು ಸಾಧ್ಯವಾಗಿಲ್ಲ. ಡಿಎಂಕೆ ಜೊತೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಜೋಡಿಸಿದೆ. ಕೋರ್ಟ್ಗೆ ನೀರಿನ ಪರಿಸ್ಥಿತಿ ತಿಳಿಸಲು ಕಾಂಗ್ರೆಸ್ಗೆ ಸಾಧ್ಯವಾಗಿಲ್ಲ. ನೀರು ಬಿಡುವ ಮುನ್ನ ಯಾಕೆ ಸರ್ವಪಕ್ಷದ ಸಭೆಯನ್ನು ಕರೆದಿಲ್ಲ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಕಾವೇರಿ ವಿಚಾರವಾಗಿ ದುರಂಕಾರದ ಮಾತು ಆಡಿದ್ದಾರೆ. ನೀರು ನಿರ್ವಹಣೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದರು.