ದೇವನಹಳ್ಳಿ: ಕಾಂಗ್ರೆಸ್ ರಾಷ್ಟ್ರದಲ್ಲಿ ಉತ್ತಮ ನಾಯಕತ್ವ ಮತ್ತು ಜನಪರ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಪ್ರಜಾ ಪ್ರಭುತ್ವ ಬದ್ಧತೆಗೆ ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಬೆಂಗಳೂರಿನ ಅವರ ನಿವಾಸದಲ್ಲಿ ಬಯಪ ಅಧ್ಯಕ್ಷ ವಿ.ಶಾಂತಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರಿಗೆ ಸಿಹಿಯನ್ನು ತಿನಿಸಿ ಮಾತನಾಡಿದರು. ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಜನರಿಗಾಗಿ, ಜನರಿಗೊಸ್ಕರ ಶ್ರಮಿಸುವ ಸರ್ಕಾರ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಪ್ರತಿಯೊಬ್ಬರೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಕೆಪಿಸಿಸಿ ಸದಸ್ಯ ಚಿನ್ನಪ್ಪ, ಬಯಪ್ಪ ನಿರ್ದೇಶಕ ಪ್ರಸನ್ನಕುಮಾರ್, ತೂಬಗೆರೆ ಬ್ಲಾಕ್ ಅಧ್ಯಕ್ಷ ರಂಗಪ್ಪ, ಮುಖಂಡ ವೆಂಕಟಪ್ಪ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಿಜಯ್ಕುಮಾರ್, ಕೆ.ಹೊಸೂರು ಶ್ರೀನಿವಾಸ್ ಇದ್ದರು.