ಚಿಕ್ಕಮಗಳೂರು: ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ದೇಶದಲ್ಲಿ ಕೋಮುದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್ ಮಾಡಿದಂತಿದೆ. ಬಿ.ಕೆ.ಹರಿಪ್ರಸಾದ್ ಹೇಳಿಕೆ ಇದರ ಒಂದು ಝಲಕ್ ಆಗಿದೆ ಎಂದು ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ನಗರದ ವಿಜಯಪುರ ಬಡಾವಣೆಯಲ್ಲಿ ಭಾನುವಾರ ಅಯೋಧ್ಯೆ ಮಂತ್ರಾಕ್ಷತೆ ಮತ್ತು ಆಹ್ವಾನ ಪತ್ರಿಕೆಯನ್ನು ಮನೆ ಮನೆಗೆ ವಿತರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ನ ಮಾನಸಿಕ ಸ್ಥಿತಿಯೇ ಕೋಮು ಗಲಭೆ ಸೃಷ್ಟಿಸುವುದು. ಪಿಎಫ್ಐ ನಂತಹ ದೇಶದ್ರೋಹಿಗಳ. ಭಯೋತ್ಪಾದಕರ ಕೇಸುಗಳನ್ನು ಹಿಂದಕ್ಕೆ ಪಡೆಯುವುದಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಭಯೋತ್ಪಾದಕ ದಾಳಿ ನಡೆದಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ವಿಧ್ವಂಸಕ ಕೃತ್ಯದ ಪ್ಲಾನ್ನ ಪ್ರಕರಣಗಳು ಮಂಗಳೂರು, ಬಳ್ಳಾರಿ, ಪುತ್ತೂರು, ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಇವುಗಳನ್ನು ಗಂಭೀರವಾಗಿ ತೆಗೆದುಕೊಳ್ಳುತಿಲ್ಲ. ಆ ಮೂಲಕ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸ ನಿರಂತರವಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.