ಪ್ರತಿನಿಧಿ ವರದಿ ಚಾಮರಾಜನಗರ
ಭಾರತೀಯರಿಗೆ ಸಂವಿಧಾನ ಪವಿತ್ರ ಗ್ರಂಥವಾಗಿದ್ದು, ಅದರ ಮಹತ್ವವನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ ಸಲಹೆ ನೀಡಿದರು.
ನಗರದ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಜನಹಿತಾಶಕ್ತಿ ಹೋರಾಟ ವೇದಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ಸಹಯೋಗದದಲ್ಲಿ ನಡೆದ ಸಂವಿಧಾನ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ವ್ಯವಸ್ಥೆ ಸಂವಿಧಾನದಡಿಯಲ್ಲಿ ನಡೆಯುತ್ತಿದೆ. ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಬೇಕು. ಭಾರತದ ಸಂವಿಧಾನದ ಆಶಯಗಳನ್ನು ವಿದೇಶಿಯರು ಅಳವಡಿಸಿಕೊಳ್ಳುತ್ತಿದ್ದಾರೆ. ನಮ್ಮ ಸಂವಿಧಾನ ಪವಿತ್ರವಾಗಿದ್ದು, ಪ್ರತಿಯೊಬ್ಬರ ಜೀವನಕ್ಕೂ ಅವಶ್ಯಕವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಪ್ರಾಂಶುಪಾಲೆ ಎಚ್.ಪಿ.ನಿರ್ಮಲ, ಪ್ರಾಂಶುಪಾಲ ರಂಗಸ್ವಾಮಿ, ಜನ ಹಿತಾಸಕ್ತಿ ಹೋರಾಟ ವೇದಿಕೆ ಕಾರ್ಯದರ್ಶಿ ಕಾಡಹಳ್ಳಿ ನಾಗರಾಜು, ವಿದ್ಯಾರ್ಥಿಗಳು ಇದ್ದರು.
20ಸಿಎಚ್ಎನ್.4: ಚಾಮರಾಜನಗರದ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ನಡೆದ ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತ ಮಾತನಾಡಿದರು.