ಹನೂರು: ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳದೆ ದುರುಪಯೋಗ ಮಾಡಿಕೊಳ್ಳುವ ಈ ಕಾಲಘಟ್ಟದಲ್ಲಿ ಇಲ್ಲೊಬ್ಬ ತನ್ನ ಸ್ವಂತ ಹಣದಿಂದ ಕೃಷಿ ಹೊಂಡ ನಿರ್ಮಾಣ ಮಾಡಿ ನೀರು ಶೇಖರಣೆ ಮಾಡಲು ಮುಂದಾಗಿದ್ದು ಯಶಸ್ವಿಯಾಗಿದ್ದಾರೆ.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಗ್ಗುಲಲ್ಲೇ ಇರುವ ಹಳೆಯೂರು ಗ್ರಾಮದ ನಿವೃತ್ತ ಶಿಕ್ಷಕ ಮಾದಯ್ಯ ಅವರೇ ಕೃಷಿ ಹೊಂಡ ಮಾಡಿಕೊಂಡು ನೀರು ಶೇಖರಣೆ ಮಾಡಿದ್ದು ಇತರರಿಗೆ ಮಾದರಿಯಾಗಿದ್ದಾರೆ.ನಿವೃತ್ತ ಶಿಕ್ಷಕ ಸ್ವಂತ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿ ಮಳೆ ನೀರು ಸಂಗ್ರಹಣೆ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆಯೂರು ಗ್ರಾಮದ ನಿವೃತ್ತ ಶಿಕ್ಷಕ ಮಾದಯ್ಯ ಅವರೇ ತಮ್ಮ ಜಮೀನಿನಲ್ಲಿ ಮಳೆ ನೀರು ಸಂಗ್ರಹಿಸಲು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವ ಮೂಲಕ ಮಳೆ ಇಲ್ಲದೆ ಕಂಗಾಲಾಗಿ ಅಂತರ್ಜಲ ಕುಂಟಿತಗೊಂಡು ಕುಡಿಯುವ ನೀರು ಹಾಗೂ ಜನಜಾನುವಾರುಗಳಿಗೆ ಸಮಸ್ಯೆ ಉಂಟಾಗಬಾರದು ಎಂಬ ಮುಂದಾಲೋಚನೆಯಿಂದ ತಮ್ಮ ಜಮೀನಿನಲ್ಲಿ ಕೃಷಿಗೊಂಡ ನಿರ್ಮಾಣ ಮಾಡಿಕೊಂಡಿದ್ದರು ನೆನ್ನೆ ಬಿದ್ದ ಮಳೆಗೆ ಕೃಷಿ ಹೊಂಡ ತುಂಬಿದ್ದು ಹರ್ಷ ವ್ಯಕ್ತ ಪಡಿಸಿದ್ದಾರೆ.
ಹಳೆಯೂರು ಗ್ರಾಮದ ಸುತ್ತಮುತ್ತಲಿನಲ್ಲಿ ನೆನ್ನೆ ಸಂಜೆ ಸುರಿದ ಮಳೆಯಿಂದ ತಮ್ಮ ಜಮೀನಿನಲ್ಲಿ ನಿರ್ಮಾಣ ಮಾಡಲಾಗಿದ್ದ ಕೃಷಿ ಹೊಂಡ ಮಳೆ ನೀರು ಸಂಗ್ರಹಿಸಿ ಅಕ್ಕಪಕ್ಕದ ಹಾಗೂ ಇತರೆ ರೈತರಿಗೆ ಮಾದರಿಯಾಗುವ ಮೂಲಕ ಸರ್ಕಾರದ ಯೋಜನೆಗಳನ್ನು ಪಡೆದುಕೊಂಡು ರೈತರು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಮುಂದಾದರೆ.
ನಿವೃತ್ತ ಶಿಕ್ಷಕರು ಯಾವುದೇ ಅನುದಾನ ಇಲಾಖೆಯ ಸರ್ಕಾರದ ಹಣ ಪಡೆಯದೆ ತಮ್ಮ ಸ್ವಂತ ದುಡಿಮೆಯ ಹಣದಲ್ಲಿ ನಿರ್ಮಾಣ ಮಾಡಿದ್ದ ಕೃಷಿ ಹೊಂಡದಲ್ಲಿ ನೆನ್ನೆ ಸುರಿದ ಉತ್ತಮ ಮಳೆಯಿಂದ ಬರ್ತಿಯಾಗುವ ಮೂಲಕ ಇತರೆ ರೈತರಿಗೂ ಮಾದರಿಯಾಗಿದ್ದಾರೆ.