ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲು ಕ್ಷಣಗಣನೆ ಆರಂಭವಾಗಿದೆ. ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದ ಅರ್ಚಕರ ತಂಡ ದೇವಾಲಯಕ್ಕೆ ಪೂಜಾ ಸಾಮಗ್ರಿಗಳನ್ನು ತಂದಿದೆ. ದೇವಸ್ಥಾನ ಬಾಗಿಲು ತೆರೆಯುವ ಮುನ್ನ ಗರ್ಭಗುಡಿ ಬಾಗಿಲಿಗೆ ಪೂಜೆ ನಡೆಯಲಿದೆ. ಮಧ್ಯಾಹ್ನ 12 ಗಂಟೆ ನಂತರ ಗರ್ಭಗುಡಿ ಬಾಗಿಲು ತೆರೆಯಲಾಗುತ್ತದೆ.