ಬೆಂಗಳೂರು: ಬಹುಕೋಟಿ ಮುಡಾ ಹಗರಣ ಸಂಬಂಧ ಸಿಎಂ ಪತ್ನಿ ಪಾರ್ವತಿ ಮೌನ ಮುರಿದಿದ್ದು, ಸೋಮವಾರ ಸಂಜೆಯ ವೇಳೆಗೆ ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ ಮುಡಾ ಬದಲಿ ನಿವೇಶನಗಳನ್ನು ಹಿಂದಿರುಗಿಸುವುದಾಗಿ ಹೇಳಿರುವ ಅವರು, ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ಯಾವುದೂ ದೊಡ್ಡದಲ್ಲ. ನನಗೆ, ನನ್ನ ಕುಟುಂಬಕ್ಕೆ ಈ ನಿವೇಶನಗಳು ತೃಣಕ್ಕೆ ಸಮ. ನನ್ನ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ನಿವೇಶನ ಹಿಂದಿರುಗಿಸಲು ನಿರ್ಧರಿಸಿದ್ದೇನೆ ಎಂದು ಪತ್ರ ಬರೆದಿದ್ದಾರೆ.
ಇನ್ನು ಸಿಎಂ ಪತ್ನಿ ಮುಡಾ ನಿವೇಶನಗಳನ್ನು ವಾಪಸ್ ನೀಡಿರುವ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಂ ಎಲ್ ಸಿ ಸಿಟಿ ರವಿ, ಅಡಿಕೆ ಕದ್ದಾಗ ಹೋದ ಮಾನ ಆನೆ ಕೊಟ್ಟರೂ ಬಾರದು. ಮುಡಾ ಹಗರಣದಲ್ಲಿ ನಿವೇಶನದಾರರಿಗೆ ಮೋಸ ಮಾಡಲಾಗಿದೆ. ಕದ್ದ ಮಾಲನ್ನ ಈಗ ವಾಪಸ್ ಕೊಡುತ್ತಿದ್ದಾರೆ. ಇದರಿಂದ ಕಳ್ಳತನ ಆರೋಪ ಸುಳ್ಳಾಗುವುದೇ.? ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆಯೇ ಸೈಟ್ ನೀಡಿದ್ರೆ ಅದು ಪ್ರಾಮಾಣಿಕತೆ ಆದರೆ ಈಗ ಇಡಿ ತನಿಖೆ ಭೀತಿಯಿಂದ ಸೈಟ್ ವಾಪಸ್ ನೀಡಿದ್ದಾರೆ ಎಂದು ಸಿಟಿ ರವಿ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.