ದೇವನಹಳ್ಳಿ: ಯುವಜನರು ಶಾಲೆ ಮತ್ತು ಕಾಲೇಜು ಹಂತದಲ್ಲಿಯೇ ಸೇವಾ ಮಭೋಭಾವನೆ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್ ಮನವಿ ಮಾಡಿದರು.
ದೇವನಹಳ್ಳಿ ತಾಲೂಕು ಕುಂದಾಣ ಹೋಬಳಿಯ ದ್ಯಾವರಹಳ್ಳಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಲ್ಲೇಶ್ವರಂ ಹಾಗೂ ದ್ಯಾವರಹಳ್ಳಿ ಗ್ರಾಮಸ್ಥರ ಸಹಯೋಗದಲ್ಲಿ ತಾಲೂಕಿನ ದ್ಯಾವರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.
ಇಂತಹ ಶಿಬಿರಗಳಲ್ಲಿ ಮಕ್ಕಳಿ ಹೆಚ್ಚು ಹೆಚ್ಚು ಭಾಗಿಯಾಗಿ ಸೇವಾ ಚಟುವಟಿಕೆಗಳಲ್ಲಿ ತೊಡಗಬೇಕು. ಬೆಂಗಳೂರಿನ ಮಲ್ಲೇಶ್ವರಂ ಕಾಲೇಜು ವಿದ್ಯಾರ್ಥಿಗಳು ಶಿಬಿರದ ಮೂಲಕ ಗ್ರಾಮಗಳ ಸ್ವಚ್ಛತೆ ಗಿಡ ನೆಡುವ ಕಾರ್ಯಕ್ರಮ, ಹಳ್ಳಿ ಜೀವನ ಶೈಲಿ ಹಾಗೂ ಇನ್ನು ಹಲವು ಉಪಯುಕ್ತ ಮಾಹಿತಿಗಳನ್ನು ಹಾಗೂ ಸೇವಾ ಮನೋಬಹವನೆ ಬೆಳೆಸಿಕೊಲ್ಲಬೇಕು ಹಾಗೂ ಈ ಶಿಬಿರ 7 ದಿನಗಳು ನಡೆಯಲಿದ್ದು ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಸಹಕಾರ ನೀಡಬೇಕೆಂದು
ಬಯಪ ಸದಸ್ಯ ಪ್ರಸನ್ನ ಕುಮಾರ್, ಕುಂದಾಣ ಗ್ರಾಮ ಪಂಚಾಯತ್ ಅದ್ಯಕ್ಷೆ ನೇತ್ರ ನಾಗೇಶ್, ಅಭಿವೃದ್ಧಿ ಅಧಿಕಾರಿ ಪದ್ಮನಾಬ್, ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ವೆಂಕಟರಾಜು, ಮಲ್ಲೇಶ್ವರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಪ್ರತಿಮಾ, ಸಂಯೋಜಕ ಮೂರ್ತಿ, ಸಹಾಯಕ ಪ್ರಾಧ್ಯಾಪಕ ಶಿವಲಿಂಗಯ್ಯ ಇದ್ದರು.