ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಮಂಗಳವಾರ ನಡೆದ ವಿಚಾರಣೆಯಲ್ಲಿ ಸಮರ್ಥವಾಗಿ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಯಾವುದೇ ಕಾರಣಕ್ಕೂ ಬೇಲ್ ಕೊಡಬೇಡಿ ಎಂದು ತೀವ್ರ ಪ್ರತಿವಾದ ನಡೆಸಿದ್ದಾರೆ. ದರ್ಶನ್, ಪವಿತ್ರಾಗೌಡ ಮೊದಲಾದ ಆರೋಪಿಗಳು ರೇಣುಕಾಸ್ವಾಮಿ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನುವುದು ತನಿಖೆಯಿಂದ ಸಾಬೀತಾಗಿದ್ದು, ಜಾಮೀನು ನೀಡಬಾರದು ಎಂದು ಪ್ರಸನ್ನ ಕುಮಾರ್ ವಾದಿಸಿದ್ದಾರೆ.
ರೇಣುಕಾಸ್ವಾಮಿ ದೇಹದ 17 ಭಾಗದಲ್ಲಿ ಮೂಳೆ ಮುರಿದಿದೆ ಎಂಬ ಭೀಕರ ಸತ್ಯವನ್ನು ನ್ಯಾಯಾಲಯದ ಮುಂದೆ ಪ್ರಸನ್ನಕುಮಾರ್ ಕೋರ್ಟ್ ಗೆ ತಿಳಿಸಿದ್ದಾರೆ .ದರ್ಶನ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಸಿ.ವಿ ನಾಗೇಶ್ ಪೊಲೀಸರ ತನಿಖೆ ಸರಿಯಾಗಿ ನಡೆದಿಲ್ಲ ಎಂದು ಸುದೀರ್ಘ ವಾದ ಮಂಡಿಸಿ ಜಾಮೀನು ನೀಡುವಂತೆ ನ್ಯಾಯಾಲಯದಲ್ಲಿ ಹೇಳಿದ್ದಾರೆ. ಅಂತಿಮವಾಗಿ ದರ್ಶನ್ ಜಾಮೀನು ಅರ್ಜಿ ಭವಿಷ್ಯ ಇವತ್ತು ನಿರ್ಧಾರವಾಗಲಿದ್ದು, ಡಿ ಬಾಸ್ ಗೆ ಜಾಮೀನು ಸಿಗುವ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ನಿರೀಕ್ಷೆ ಇದೆ. ಸದ್ಯ ಬಳ್ಳಾರಿ ಜೈಲಲ್ಲಿ ಡಿಬಾಸ್ ಇದ್ದು, ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಬಳ್ಳಾರಿಯಲ್ಲಿ ಚಿಕಿತ್ಸೆ ಪಡೆಯೋಕೆ ಹಿಂದೇಟು ಹಾಕಿದ್ದಾರೆ.