ಮೈಸೂರು ಜಿಲ್ಲೆಯ ಟಿ.ನರಸೀಪುರ ಸರ್ಕಾರಿ ಆಸ್ಪತ್ರೆ ಮುಂದೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಧರಣಿ ನಡೆಸುತ್ತಿದೆ. 5ನೇ ಗ್ಯಾರಂಟಿ ಜೊತೆಗೆ 6ನೇ ಗ್ಯಾರಂಟಿ ಆರೋಗ್ಯ ಭಾಗ್ಯ ಜಾರಿಗೆ ಆಗ್ರಹಿಸಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲವೊಂದು ಪರೀಕ್ಷೆ & ನುರಿತ ವೈದ್ಯರು ಇಲ್ಲ. ಸುಸಜ್ಜಿತ ತಾಯಿ ಮಗು ಆಸ್ಪತ್ರೆ ನಿರ್ಮಾಣ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.