ಗೋಣಿಕೊಪ್ಪ: ಕಾವೇರಿ ಕಾಲೇಜಿನ 2023-24 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಮಾರೋಪ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಎನ್ಎಸ್ಎಸ್ ಉತ್ತಮ ಹಿರಿಯ ಸ್ವಯಂಸೇವಕ ಪ್ರಶಸ್ತಿಯನ್ನು ದರ್ಶನ್, ಉತ್ತಮ ಹಿರಿಯ ಸ್ವಯಂ ಸೇವಕಿ ಪ್ರಶಸ್ತಿಯನ್ನು ರಶ್ಮಿತ ಪಡೆದುಕೊಂಡರು. 2023-24ನೇ ಸಾಲಿನ ಘಟಕದ ಉತ್ತಮ ಸ್ವಯಂ ಸೇವಕನಾಗಿ ಸೃಜನ್, ಉತ್ತಮ ಸ್ವಯಂ ಸೇವಕಿಯಾಗಿ ಧನ್ಯ, ಶಿಸ್ತು ಬದ್ಧ ಸ್ವಯಂಸೇವಕ ಪ್ರಶಸ್ತಿಯನ್ನು ಬೃಂದಾವನ್, ರಿಷು ಕಾವೇರಪ್ಪ ಮತ್ತು ರೋಷನ್ ಪಡೆದುಕೊಂಡರು. ಆವರಣದಲ್ಲಿ ವಿವಿಧ ಹಣ್ಣಿನ ಗಿಡ ನೆಡಲಾಯಿತು.
ಎನ್ಎಸ್ಎಸ್ ಅಧಿಕಾರಿ ಎನ್.ಪಿ.ರೀತಾ ವಾರ್ಷಿಕ ವರದಿ ವಾಚಿಸಿದರು. ಎನ್ಎಸ್ಎಸ್ ಅಧಿಕಾರಿ ಎಂ.ಎನ್.ವನಿತ್ ಕುಮಾರ್ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು.
ಬಾಳುಗೋಡು ಏಕಲವ್ಯ ಕಾಲೇಜು ಪ್ರಾಂಶುಪಾಲ ಡಾ.ಐ.ಎಂ.ದಿಲನ್ ಮಾತನಾಡಿ, ಎನ್ಎಸ್ಎಸ್ ಶಿಸ್ತು ಮತ್ತು ಸೇವಾ ಮನೋಭಾವನೆ, ಪರಿಸರದ ಕುರಿತು ಕಾಳಜಿಯನ್ನು ಬೆಳೆಸಿಕೊಳ್ಳಲು ಪ್ರೇರೇಪಿಸುವುದರ ಜತೆಗೆ ಪ್ರತಿಭೆಗೆ ಉತ್ತಮ ವೇದಿಕೆ ಒದಗಿಸಿಕೊಡುತ್ತದೆ ಎಂದರು.
ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಿಯಪ್ಪ ಮಾತನಾಡಿ, ವೇದಿಕೆಯಿಂದ ಬದುಕಿನಲ್ಲಿ ಬರುವ ಸವಾಲುಗಳನ್ನು ಎದುರಿಸಲು ಬೇಕಾದ ವಿಶ್ವಾಸವನ್ನು ವಿದ್ಯಾರ್ಥಿಗಳಲ್ಲಿ ತುಂಬುತ್ತದೆ. ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಐಕ್ಯೂಎಸಿ ಸಂಚಾಲಕಿ ಡಾ.ನಯನ ತಮ್ಮಯ್ಯ ಇದ್ದರು.
ಫೋಟೋ 9 ಜಿಕೆಪಿ 02 ; ಗೋಣಿಕೊಪ್ಪ ಕಾವೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಮಾರೋಪ ನಡೆಯಿತು.