ಬೆಂಗಳೂರು : ಬೆಂಗಳೂರಿನಲ್ಲಿ ಯಾವ ಏರಿಯಾಗೆ ಹೋದರೂ, ಯಾವ ವಾರ್ಡ್ಗೆ ಹೋದರೂ ನೀರಿನ ಸಮಸ್ಯೆ ಎದ್ದು ಕಾಣುತ್ತಿದೆ. ಹಲವೆಡೆ ವಾರಕ್ಕೆ 2 ದಿನ ಮಾತ್ರ ಕಾವೇರಿ ನೀರು ಬರುತ್ತಿದೆ. ಬೋರ್ವೆಲ್ಗಳ ನೀರು ಕೂಡ ಸರಿಯಾಗಿ ಸಿಗುತ್ತಿಲ್ಲ. ಇದರಿಂದ ಬೆಂಗಳೂರು ನಿವಾಸಿಗರು ಕಂಗಾಲಾಗಿದ್ದಾರೆ. ಇಂತಹ ಬರ ಸಮಯದಲ್ಲಿ ಜನರು ನೀರಿನ ಮೌಲ್ಯ ಅರಿಯಲಿ, ನೀರನ್ನು ಸರಿಯಾದ ಪ್ರಮಾಣದಲ್ಲಿ ಬಳಸಲಿ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ‘ ʼನೀರು ಉಳಿಸಿ ಬೆಂಗಳೂರು ಬೆಳೆಸಿ’ ಅಭಿಯಾನಕ್ಕೆ ಚಾಲನೆ ನೀಡಿದೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ‘ನೀರು ಉಳಿಸಿ’ ಅಭಿಯಾನಕ್ಕೆ ಚಾಲನೆ ನೀಡಿದರು.
ಇನ್ನು ನಗರದ ಬರದ ಬಗ್ಗೆ ಮಾತನಾಡಿದ ಅವರು, 6,900 ಬೋರ್ವೆಲ್ ಬತ್ತಿ ಹೋಗಿದೆ. 9,000 ಬೋರ್ವೆಲ್ಗಳು ಚಾಲ್ತಿಯಲ್ಲಿವೆ. ಹೊಸ ಬೋರ್ವೆಲ್ ಕೊರೆಯಲು ಅನುಮತಿ ನೀಡುತ್ತಿದ್ದೇವೆ. ಇನ್ನೊಂದು ಹೊಸ ಬೋರ್ವೆಲ್ ಕೊರೆಯುವಾಗ BWSSB ಪರ್ಮಿಷನ್ ತೆಗೆದುಕೊಳ್ಳಬೇಕು. ಅವರಿಗೆ ಎಷ್ಟು ನೀರು ಬೇಕು ಅದನ್ನು ಬಳಸಿ ಉಳಿದ ನೀರನ್ನು ಸರ್ಕಾರಕ್ಕೆ ಕೊಡಬೇಕು. ಬಳಿಕ ಯಾವುದಕ್ಕೆ ಹಂಚಿಕೆ ಮಾಡಬೇಕು ಎಂಬುದನ್ನು ನಿಗಮ ಡಿಸೈಡ್ ಮಾಡುತ್ತೆ. ದೂರದ ಆಲೋಚನೆ ಇಟ್ಕೊಂಡು ಮೇಕೆ ದಾಟು ಹೋರಾಟ ಮಾಡಿದ್ದೆ. ನೀರನ್ನು ಹೇಗೆ ಉಳಿಸ ಬೇಕು, ಮುಂದಿ ಪೀಳಿಗೆಗೆ ಹೇಗೆ ಉಪಯುಕ್ತವಾಗಿಸಬೇಕು ಎಂದು ಆಲೋಚನೆ ಮಾಡಿದ್ದೇವೆ. ಯುದ್ಧದ ರೀತಿಯಲ್ಲಿ ನಾವು ನೀರಿಗಾಗಿ ಯೋಜನೆ ರೂಪಿಸಬೇಕಿದೆ. ಟ್ಯಾಂಕರ್ ಮಾಫಿಯಾಕ್ಕೆ ನಿಯಂತ್ರಣ ಹೇರುವ ಕೆಲಸ ಆಗಿದೆ. 110 ಹಳ್ಳಿಗಳಿಗೂ ನೀರನ್ನು ಒದಗಿಸುವ ಕೆಲಸ ಮಾಡುತ್ತೇವೆ ಎಂದರು.