ಮಾಜಿ ಸಚಿವ ಡಾ.ಅಶ್ವಥ್ ನಾರಾಯಣ್ ಆರೋಪ
ಪ್ರತಿನಿಧಿ ವರದಿ ಸಿದ್ದಾಪುರ
ಕಾವೇರಿ ನದಿ ದಡದ ಗ್ರಾಮಗಳಿಗೆ ಮಾಜಿ ಸಚಿವ ಡಾ.ಅಶ್ವಥ್ ನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿದ್ದಾಪುರ ಕಾಳಜಿ ಕೇಂದ್ರಕ್ಕೆ ಆಗಮಿಸಿದ ಅವರು, ಸಂತ್ರಸ್ತರ ಮನವಿ ಆಲಿಸಿದರು. ಶಾಶ್ವತ ಪುನರ್ವಸತಿ ಕಲ್ಪಿಸಬೇಕು ಎಂದು ಸಂತ್ರಸ್ತರು ಒತ್ತಾಯಿಸಿದರು.
ಬಳಿಕ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗ ತಕ್ಷಣ ಪರಿಹಾರ ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಪರಿಹಾರ ವಿತರಣೆಗೆ ವಿಳಂಬ ಮಾಡುವುದು ಸರಿಯಲ್ಲ. ಕೂಡಲೇ ಸಂತ್ರಸ್ತರ ಬೇಡಿಕೆಯನ್ನು ಈಡೇರಿಸಿ ಶಾಶ್ವತ ಪುನರ್ ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಶಾಶ್ವತ ಪರಿಹಾರದ ಚಿಂತನೆ ಮಾಡಿ ಜಾಗ ಗುರುತಿಸಲಾಗಿತ್ತು. ಸಂತ್ರಸ್ತರು ಸ್ಥಳದಿಂದ ತೆರಳಲು ಮುಂದಾಗಿರಲಿಲ್ಲ. ಈಗ ಸಂತ್ರಸ್ತರು ಪುನರ ವಸತಿ ಸ್ಥಳಗಳಿಗೆ ತೆರಳಲು ಒಪ್ಪಿದ್ದಾರೆ. ಸರ್ಕಾರ ಆದಷ್ಟು ಬೇಗ ಶಾಶ್ವತ ವ್ಯವಸ್ಥೆಯನ್ನು ಮಾಡಬೇಕಿದೆ. ಬಿಜೆಪಿ ವಿರೋಧ ಪಕ್ಷವಾಗಿ ಸಂತ್ರಸ್ತರ ಪರವಾಗಿ ಒತ್ತಾಯ ಮಾಡುತ್ತದೆ ಎಂದು ಹೇಳಿದರು.
ಎಂಎಲ್ಸಿ ಸುಜಾ ಕುಶಾಲಪ್ಪ, ವಿಧಾನ ಸಭಾ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಗುಮ್ಮಟ್ಟೀರ ಕಿಲನ್ ಗಣಪತಿ, ಮುಖಂಡರು ಇದ್ದರು.
ಫೋಟೋ 1 ಎಂಡಿಕೆ 01: ಮಾಜಿ ಸಚಿವ, ಬಿಜೆಪಿ ಮುಖಂಡ ಡಾ.ಅಶ್ವಥ್ ನಾರಾಯಣ್ ಸಿದ್ದಾಪುರ ಕಾಳಜಿ ಕೇಂದ್ರಕ್ಕೆ ಬೇಟಿ ನೀಡಿ ಸಂತ್ರಸ್ಥರ ಸಮಸ್ಯೆ ಆಲಿಸಿದರು.