ಬೆಂಗಳೂರು: ‘ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಆಗಿರಬೇಕಂತೆ, ಅಬ್ಬಾ!’ ಹೀಗೆಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದು ಮತ್ಯಾರೂ ಅಲ್ಲ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ವಿರುದ್ಧ ಈಗ ಸಿದ್ದರಾಮಯ್ಯ ಸರ್ಕಾರದವರು ಕೋರ್ಟಿಗೆ ಹೋಗಿದ್ದಾರೆ. ರೈತರ ಸಾಲದ ಮೇಲೆ ಬಡ್ಡಿ ಮನ್ನಾ ಮಾಡಿ ಎಂದಾಗ ಅಂದಿನ ಯುಪಿಎ ಸರ್ಕಾರದ ಪ್ರಧಾನಿ ಮನಮೋಹನ್ ಸಿಂಗ್ ಆಗದು ಎಂದಿದ್ದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯನವರೇ ಕೋರ್ಟಿಗೆ ಅರ್ಜಿ ಹಾಕುತ್ತೀರಾ ಎಂದು ಪ್ರಶ್ನಿಸಿದರು. ಅಲ್ಲದೆ, ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ ಎನ್ನುವ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಭಾವರಿಗೆ, ನಮೋ ನಮಃ ಎಂದು ಕುಹಕವಾಡಿದರು. ನನಗೆ ಬಂದು ಪ್ರಚಾರ ಭಾಷಣ ಮಾಡುವ ಶಕ್ತಿ ಇದೆ. ಬೆಂಗಳೂರು ಗ್ರಾಮಾಂತರದ ಉಸ್ತುವಾರಿ ಆರ್. ಅಶೋಕ್ಗೆ ನೀಡಿ. ಒಬ್ಬ ಸಾಮಾನ್ಯ ಕಾರ್ಯಕರ್ತರನ್ನೂ ಬಿಡದೇ ಹೋರಾಟ ಮಾಡೋಣ ಎಂದು ದೇವೇಗೌಡರು ಬಿಜೆಪಿ, ಜೆಡಿಎಸ್ ನಾಯಕರು, ಕಾರ್ಯಕರ್ತರಿಗೆ ಕರೆ ನೀಡಿದರು.