ಬೆಂಗಳೂರು, (ಜನವರಿ 21): ಅಯೋಧ್ಯೆಯಲ್ಲಿ ನಾಳೆ (ಜನವರಿ 22) ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ (HD Devegowda) ಅವರು ಕುಟುಂಬ ಸಮೇತರಾಗಿ ಅಯೋಧ್ಯೆಗೆ ತೆರಳಿದ್ದಾರೆ. ದೇವೇಗೌಡರಿಗೆ ವಯಸ್ಸಾಗಿರುವ ಹಿನ್ನೆಲೆಯಲ್ಲಿ ಅವರು ಅಯೋಧ್ಯೆಗೆ ಹೋಗಬೇಕೋ ಬೇಡ್ವಾ ಎನ್ನುವ ಯೋಚನೆಯಲ್ಲಿದ್ದರು. ಆದರೂ ಸಹ ಅಯೋಧ್ಯೆಗೆ ಹೋಗಲು ಪ್ರಯತ್ನಿಸುತ್ತೇನೆ ಎಂದಿದ್ದರು. ಅದರಂತೆ ಇಂದು ತಮ್ಮ ಆರೋಗ್ಯವನ್ನು ಲೆಕ್ಕಿಸಿದೇ ಅಯೋಧ್ಯೆಗೆ ಹೊರಟ್ಟಿದ್ದಾರೆ. ಇನ್ನು ದೇವೇಗೌಡ್ರಿಗೆ ಪತ್ನಿ, ಪುತ್ರ ಹಾಗೂ ಮೊಮ್ಮಗ ಸಾಥ್ ನೀಡಿದ್ದಾರೆ. ಇಂದು (ಜನವರಿ 21) ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಪ್ರೈವೆಟ್ ಜೆಟ್ನಲ್ಲಿ ದೇವೇಗೌಡ ಜೊತೆ ಪತ್ನಿ ಚನ್ನಮ್ಮ, ಪುತ್ರ ಎಚ್.ಡಿ. ಕುಮಾರಸ್ವಾಮಿ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಜೊತೆ ತೆರಳಿದರು. ಪ್ರೈವೆಟ್ ಜೆಟ್ನಲ್ಲಿ ಕುಟುಂಬ ಸಮೇತರಾಗಿ ಹೋಗುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.