ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ರೈತ ಹಿತರಕ್ಷಣಾ ಸಮಿತಿಯಿಂದ ಧರಣಿ ಸತ್ಯಾಗ್ರಹ ಮುಂದುವರೆದಿದೆ. ತಮಿಳುನಾಡಿಗೆ ನೀರು ಹರಿಸುತ್ತಿರೋದನ್ನ ಖಂಡಿಸಿ ತಕ್ಷಣ ನೀರು ನಿಲ್ಲಿಸಲು ಆಗ್ರಹಿಸಿದ್ದಾರೆ. ರೈತರಿಗಿಂತ ಅಧಿಕಾರವೇ ಮುಖ್ಯ ಆಯ್ತಾ ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಧರಣಿಯಲ್ಲಿ ರೈತ ಮುಖಂಡರು ಭಾಗಿಯಾಗಿದ್ದಾರೆ.