ಪ್ರತಿನಿಧಿ ವರದಿ ಸೋಮವಾರಪೇಟೆ
ಗಾಳಿ, ಮಳೆಯಿಂದ ವಾಸದ ಮನೆಗೆ ಹಾನಿಯಾಗಿದ್ದ ಬಡ ಕುಟುಂಬಗಳಿಗೆ ದಾನಿಗಳು ನೀಡಿದ ಆಹಾರ ಸಾಮಾಗ್ರಿಗಳ ಕಿಟ್ನ್ನು ಕರ್ನಾಟಕ ರಕ್ಷಣ ವೇದಿಕೆಯ ಪದಾಧಿಕಾರಿಗಳು ವಿತರಣೆ ಮಾಡಿದರು.
ಗೌಡಳ್ಳಿ ಗ್ರಾಪಂಗೆ ಸೇರಿದ ಚನ್ನಾಪುರ ಹಾಗೂ ಶುಂಠಿ ಮಂಗಳೂರು ಗ್ರಾಮದಲ್ಲಿ ಮಳೆ, ಗಾಳಿಗೆ ಮನೆಗಳಿಗೆ ಹಾನಿಯಾಗಿತ್ತು. ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಅವರು, ಕೊಪರ್ ಎಸ್ಟೇಟ್ ಮಾಲೀಕ ಕೆ.ವಿ.ನಿಶಾಂತ್ ಅವರು ನೀಡಿದ ಆಹಾರ ಸಾಮಾಗ್ರಿಗಳನ್ನು ಎಂಟು ಕುಟುಂಬಗಳಿಗೆ ವಿತರಿಸಿದರು.
ಶಿವಪ್ರಸಾದ್, ಟಿ.ಆರ್.ರಾಮಚಂದ್ರ, ವಿಶ್ವನಾಥ್, ವಿಶ್ವರೂಪ ಆಚಾರ್ಯ, ಡೀವನ್ ಡಿಸೋಜ ಇದ್ದರು.
ಚಿತ್ರ:- ಸೋಮವಾರಪೇಟೆ ತಾಲೂಕು ಕರವೇ ಪದಾಧಿಕಾರಿಗಳು ಮಳೆಗಾಳಿಯಿಂದ ಸಂಕಷ್ಟದ ಸಿಲುಕಿದ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು.