ಮಡಿಕೇರಿ: ಸಾಮಾಜಿಕ ಅರಣ್ಯ ವಲಯದ ಹೊದ್ದೂರು ವಾಟೆಕಾಡು ಇಲಾಖೆಯ ಸಸ್ಯಕ್ಷೇತ್ರ ಹಾಗೂ ವಿರಾಜಪೇಟೆ ಸಾಮಾಜಿಕ ಅರಣ್ಯ ವಲಯದಲ್ಲಿನ ಕದನೂರು ಇಲಾಖಾ ಸಸ್ಯ ಕ್ಷೇತ್ರದಲ್ಲಿ ವಿವಿಧ ಹಣ್ಣಿನ, ಔಷಧೀಯ ಹಾಗೂ ಕಾಡು ಜಾತಿಯ ಸಸಿಗಳನ್ನು ನರ್ಸರಿ ಮಾಡಲಾಗಿದೆ.
ಮಹಾಗನಿ, ಸಿಲ್ವರ್, ನೇರಳೆ, ಹಲಸು, ನಿಂಬೆ, ಅಗಸೆ, ನೆಲ್ಲಿ, ಸಂಪಿಗೆ, ಕಾಡು ಬಾದಾಮಿ, ಲಾವಂಚ, ಹುಣಸೆ, ಮಾವು, ಹೆಬ್ಬಲಸು, ಸೀಬೆ ಮುಂತಾದ ಸಸಿಗಳು ಲಭ್ಯವಿದ್ದು, ರೈತ ಫಲಾನುಭವಿಗಳಿಗೆ ಸರ್ಕಾರದ ಹೊಸ ಪರಿಷ್ಕೃತ ಆದೇಶದಂತೆ 3 ರೂ.ಹಾಗೂ 6 ರೂ. ಪ್ರತಿ ಸಸಿಗೆ ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದು.
ರೈತರು ತಮ್ಮ ಆಧಾರ್ ಪ್ರತಿ, ರಾಷ್ಟ್ರಿಕೃತ ಬ್ಯಾಂಕ್ ಪಾಸ್ಬುಕ್ ಪ್ರತಿ, ತಮ್ಮ ಜಮೀನಿನ ಆರ್ಟಿಸಿ ಪ್ರತಿಯನ್ನು ನೀಡಿ ಸಸಿಗಳನ್ನು ಪಡೆಯಬಹುದು ಹಾಗೂ ಬಿಪಿಎಲ್ ಕಾರ್ಡ್ ಮತ್ತು ನರೇಗಾ ಉದ್ಯೋಗ ಚೀಟಿ ಹೊಂದಿರುವ ರೈತರಿಗೆ ನೆಟ್ಟ 100 ಸಸಿಗಳಿಗೆ ಸರಿಸುಮರು 8 ಸಾವಿರದಿಂದ 10 ಸಾವಿರ ರೂ.ಗಳ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಮಡಿಕೇರಿ ಉಪ ವಲಯ ಅರಣ್ಯಾಧಿಕಾರಿಗಳು 9164303717, 9164698938, ಗಸ್ತು ಅರಣ್ಯ ಪಾಲಕರು 9632995904, 9980434942, ವಿರಾಜಪೇಟೆ ಉಪ ವಲಯ ಅರಣ್ಯಾಧಿಕಾರಿ 9663945228, 9481762555 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ಪ್ರಕಟಣೆ ತಿಳಿಸಿದೆ.