ಬೆಂಗಳೂರು (ಸೆ.23): ‘ಸಮುದಾಯವಾರು ಇನ್ನೂ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕೆಂಬ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಹೇಳಿಕೆಗೆ ನಾನು ಉತ್ತರ ನೀಡುವುದಿಲ್ಲ. ಅದಕ್ಕೆ ಉತ್ತರ ಕೊಡೋರು ಇದ್ದಾರೆ, ಅವರು ಕೊಡುತ್ತಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ‘ಪ್ರತಿಯೊಬ್ಬರಿಗೂ ಆಸೆಗಳು ಇರುತ್ತವೆ. ಆಸೆ ಪಡೋರಿಗೆ ನಾನು ಉತ್ತರ ಕೊಡೋದಿಲ್ಲ. ಉತ್ತರ ಕೊಡುವವರಿದ್ದಾರೆ. ಹೈಕಮಾಂಡ್ ಇದೆ. ಅವರು ಉತ್ತರ ಕೊಡುತ್ತಾರೆ. ನನ್ನನ್ನು ಉಪಮುಖ್ಯಮಂತ್ರಿ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ರಾಜಕೀಯವಾಗಿ ನಾನು ನಡೆದು ಬಂದ ದಾರಿಯನ್ನು ನೋಡಿದ್ದೀರಿ. ನನ್ನ ಹೋರಾಟ ನೋಡಿದ್ದೀರಿ. ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಟ ಮಾಡಿದ್ದಕ್ಕಾಗಿಯೇ ನನ್ನನ್ನು ಇಲ್ಲಿ ಕೂರಿಸಲಾಗಿದೆ’ ಎಂದು ತಿರುಗೇಟು ನೀಡಿದರು.
ಹೋರಾಟ ಮಾಡಿ ಇಲ್ಲಿಗೆ ಬಂದಿದ್ದೇನೆ: ನನ್ನನ್ನು ಉಪಮುಖ್ಯಮಂತ್ರಿ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ. ರಾಜಕೀಯವಾಗಿ ನಾನು ನಡೆದು ಬಂದ ದಾರಿಯನ್ನು ನೋಡಿದ್ದೀರಿ. ನನ್ನ ಹೋರಾಟ ನೋಡಿದ್ದೀರಿ. ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಟ ಮಾಡಿದ್ದಕ್ಕಾಗಿಯೇ ನನ್ನನ್ನು ಇಲ್ಲಿ ಕೂರಿಸಲಾಗಿದೆ.