ಕನಕಪುರ : ಮಾ.28ರಂದು ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಗೃಹ ಸಚಿವರಾದ ಪರಮೇಶ್ವರ್ ಅವರು ಕೂಡ ಆಗಮಿಸಲಿದ್ದಾರೆ. ಅದೇ ರೀತಿ ಸಾರ್ವಜನಿಕರಿಗೂ ಆಹ್ವಾನ ನೀಡಿ, ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದೇನೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ತಿಳಿಸಿದರು.
ಕನಕಪುರದಲ್ಲಿ ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಪಕ್ಷ ಸೇರ್ಪಡೆಯಾಗುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಅವರು ಬಹಳ ದಿನಗಳಿಂದ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ. ಅವರ ಸ್ವಯಂ ತೀರ್ಮಾನದ ಬಗ್ಗೆ ಜಿಲ್ಲೆಯ ಮುಖಂಡರು ಹಾಗೂ ನಾಯಕರ ಜತೆ ಚರ್ಚೆ ಮಾಡಿ ಅವರ ಅಭಿಪ್ರಾಯದ ಮೇರೆಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.