ಶಾಸಕ ಕದಲೂರು ಉದಯ್
ಕೆ.ಎಂ.ದೊಡ್ಡಿ: ಜೆಡಿಎಸ್-ಬಿಜೆಪಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅನುಕಂಪ ಗಿಟ್ಟಿಸಿಕೊಳ್ಳಲು ಭಾವನಾತ್ಮಕ ಮಾತುಗಳನ್ನು ಆಡಿ ಕಣ್ಣಿರುಡುತ್ತಾರೆ. ಅವರ ಮಾತಿಗೆ ಮರಳಾಗಬೇಡಿ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.
ಭಾರತೀನಗರ ಹಾಗೂ ಚಿಕ್ಕರಸಿನಕೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಚುನಾವಣ ಪ್ರಚಾರದಲ್ಲಿ ಮಾತನಾಡಿದರು.
ನಿಮಗೆ ಜಿಲ್ಲೆಯ ಮಗ ಬೇಕಾ? ಅಥವಾ ಹೊರಗಿನಿಂದ ಬಂದವರು ಬೇಕಾ? ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಅಧಿಕಾರದಲ್ಲಿದ್ದಾಗಲೇ ಜಿಲ್ಲೆಗೆ ಏನು ಕೊಡುಗೆ ನೀಡಿಲ್ಲ. ಜಿಲ್ಲೆಗೆ ಬಂದಿದ್ದ ಅನುದಾನವನ್ನು ಹಿಂದಕ್ಕೆ ತೆಗೆದುಕೊಂಡು ಜಿಲ್ಲೆಯ ಜನರಿಗೆ ಮೋಸ ಮಾಡಿದ್ದಾರೆ ಎಂದರು.
ಸಾತನೂರು, ರಾಮನಗರ, ಮಧುಗಿರಿ, ಚಿಕ್ಕಬಳ್ಳಾಪುರ, ಚನ್ನಪಟ್ಟಣ ಮುಗಿಸಿ ಈಗ ಮಂಡ್ಯಕ್ಕೆ ಬಂದಿದ್ದಾರೆ ಹೋದಕಡೆಯಲೆಲ್ಲ ಇದು ನನ್ನ ಕರ್ಮ ಭೂಮಿ ಎನ್ನುತ್ತಾರೆ. ಚುನಾವಣೆ ನಂತರ ಮತ್ತೆಲ್ಲಿಗೆ ಹೋಗುತ್ತಾರೋ ಗೊತ್ತಿಲ್ಲ. ಏಳು ಕ್ಷೇತ್ರ ಗೆದ್ದು ಮುಖ್ಯಮಂತ್ರಿ ಆಗಿದ್ದರು ಜಿಲ್ಲೆಗೆ ಯಾವುದೇ ಶಾಶ್ವತ ಯೋಜನೆ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ರೈತರ ಮಕ್ಕಳು ಅಂತಾರೆ, ಒಂದು ನಾಲೆಯನ್ನೂ ಅಭಿವೃದ್ಧಿ ಮಾಡಿಲ್ಲ, ಕಾವೇರಿ ವಿಚಾರವಾಗಿ ನ್ಯಾಯ ಕೊಡಿಸಲಿಲ್ಲ. ಆನರನ್ನು ನಂಬಿಸಲು ಕಣ್ಣಿರು ಸುರಿಸುತ್ತ ಜನರನ್ನು ಮರಳು ಮಾಡುವ ವಿದ್ಯಾಭ್ಯಾಸ ಚೆನ್ನಾಗಿ ಕರಗತ ಮಾಡಿ ಕೊಂಡಿದ್ದಾರೆ ಎಂದು ಟೀಕಿಸಿದರು.
ರಾಜ್ಯದ ಯಾವುದೇ ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಟ್ಟಿಲ್ಲ. ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗುಸುವುದೇ ಇವರ ಜೀವನ ಉದ್ದೇಶವಾಗಿದ್ದು ಕೃತಜ್ಞತಾ ಮನೋಭಾವ ಇಲ್ಲದ ವ್ಯಕ್ತಿತ್ವ ಎಚ್ಡಿ ಕುಮಾರಸ್ವಾಮಿ ಅವರದು ಎಂದು ಕಿಡಿಕಾರಿದರು.
ಮಂಡ್ಯ ಲೋಕಸಭಾ ಅಭ್ಯಥಿ ಸ್ಟಾರ್ ಚಂದ್ರು ಅವರು ರಾಜಕೀಯ ಮಾಡಲು ಬಂದಿಲ್ಲ, ಜನಸೇವೆ ಮಾಡಲು ಬಂದಿದ್ದು ಕಾಂಗ್ರೆಸ್ ಜನರಿಗೆ ನೀಡಿರುವ ಗ್ಯಾರಿಗಳನ್ನು ಮಣಗೊಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.
ಕೊನೆ ಭಾಗದ ರೈತರ ಸಾವಿರಾರು ಎಕರೆಗಳ ಜಮೀನಿಗೆ ನೀರುಣಿಸಲು ಹಲವು ವರ್ಷಗಳಿಂದ ಮಂದಾಗತಿಯಲ್ಲಿ ಸಾಗುತ್ತಿದ್ದ ಕೂಳಗೆರೆ ಹಾಗೂ ತಿಟ್ಟಮಾರನಹಳ್ಳಿ ಏತ ನೀರಾವರಿ ಯೋಜನೆಯನ್ನು ಶೀಘ್ರದಲ್ಲೆ ಪೂರ್ಣಗೊಳಿಸಲಾಗುವುದೆಂದು ಭರವಸೆ ನೀಡಿದರು.
ಬಳಿಕ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಮಾತನಾಡಿ, ನಾನು ರೈತನ ಮಗನಾಗಿದ್ದು ಜಿಲ್ಲೆಯ ರೈತರ ಹಿತ ಕಾಯಲು ನನ್ನನ್ನು ಅತ್ಯಧಿಕ ಮತಗಳಿಂದ ಜಯಗಳಿಸಿ ಕಾಂಗ್ರೆಸ್ ಶಕ್ತಿ ಹೆಚ್ಚಿಸಿ ಎಂದರು.
ಮಾಜಿ ಸಚಿವ ಬಿ. ಸೋಮಶೇಖರ್, ಜಿ.ಪಂ. ಮಾಜಿ ಸದಸ್ಯರಾದ ಬಿ.ಬಸವರಾಜು, ಎ.ಎಸ್.ರಾಜೀವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟ್ಟನಹಳ್ಳಿ ಶಿವಲಿಂಗೇಗೌಡ ಸೇರಿದಂತೆ ಹಲವರಿದ್ದರು.
—————–
೧೬ಏಒಆ-೧ ಕೆ.ಎಂ.ದೊಡ್ಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಶಾಸಕ ಕದಲೂರು ಉದಯ್ ಮತಯಾಚಿಸುವ ವೇಳೆ ಬೃಹತ್ ಹಾರ ಹಾಕಿ ಅಭಿನಂಧಿಸಿದರು.
——————–