ಪ್ರತಿನಿಧಿ ವರದಿ ಮಡಿಕೇರಿ
ಆದಿ ದ್ರಾವಿಡ ಸಮಾಜ ಸೇವಾ ಸಂಘದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 133ನೇ ಜನ್ಮ ದಿನವನ್ನು ಬಿಳಿಗೇರಿ ಗ್ರಾಮದಲ್ಲಿ ಆಚರಿಸಲಾಯಿತು.
ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಎಚ್.ಎಂ.ಸೋಮಪ್ಪ ಮಾತನಾಡಿ, ಶಿಕ್ಷಣದಿಂದ ಮಾತ್ರ ಈ ದೇಶದ ಅಭಿವೃದ್ಧಿ ಸಾಧ್ಯ. ಅಂಬೇಡ್ಕರ್ ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಸಂದೇಶ ನೀಡಿದ್ದಾರೆ. ನಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಇಂದು ಸಂವಿಧಾನ ನಮಗೆ ನೆರವಾಗಿದೆ. ಸಮಾನತೆ, ಮತದಾನದ ಹಕ್ಕು ಮತ್ತು ಪ್ರಶ್ನೆ ಮಾಡುವ ಅವಕಾಶವನ್ನು ಕಲ್ಪಿಸಿದೆ ಎಂದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಮಧು, ಸದಸ್ಯರಾದ ಹೆಚ್.ಎಂ.ಕೃಷ್ಣಪ್ಪ. ಗೋಪಾಲ, ಗಣೇಶ, ಲೋಕೇಶ, ರಾಮು, ನಾರಾಯಣ, ಸೀನ ಮತ್ತಿತರರು ಉಪಸ್ಥಿತರಿದ್ದರು.