ಪ್ರತಿನಿಧಿ ವರದಿ ಚಾಮರಾಜನಗರ
ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಬಿ.ಟಿ.ಕವಿತಾ ಅವರು ಬುಧವಾರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪದ್ಮಿನಿ ಸಾಹು ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಕವಿತಾ ಅವರು ನಾಗರಿಕ ಹಕ್ಕು ನಿರ್ದೇಶನಾಲಯದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯು ಎರಡು ರಾಜ್ಯಗಳ ಗಡಿ ಹಂಚಿಕೊಂಡಿದ್ದು, ಚಾಮರಾಜನಗರವನ್ನು ಸುರಕ್ಷಿತ ಜಿಲ್ಲೆಯನ್ನಾಗಿ ಮಾಡಲು ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚುತ್ತಿರುವ ಕಳವು ಪ್ರಕರಣಗಳಿಗೆ ಕಡಿವಾಣ ಹಾಕಲಾಗತ್ತದೆ ಎಂದು ಹೇಳಿದರು.
3ಸಿಎಚ್ಎನ್.2:
ಚಿತ್ರವಿದೆ