ತುಮಕೂರು : ಬರ ನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ, ರೈತರಿಗೆ ಬೆಳೆ ನಷ್ಟ ಪರಿಹಾರ ಸೇರಿದಂತೆ ವಿವಿಧ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಸಾರ್ವಜನಿಕರಿಂದ ಯಾವುದೇ ದೂರು ಬಂದರೂ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.