ಬೆಂಗಳೂರಿನ : ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಾಟೆ ಯಾರು ಮಾಡಿದರು ಅಂತ ವಿಚಾರಣೆ ನಡೆಯುತ್ತಿದೆ. ಆಂಧ್ರ ಪ್ರದೇಶದಿಂದಲೂ ಬ್ಯಾಡಗಿ ಮಾರುಕಟ್ಟೆಗೆ ರೈತರು ಬರುತ್ತಾರೆ. ನಿನ್ನೆ ಘಟನೆಯಲ್ಲಿ 6-7 ಗಾಡಿಗಳನ್ನು ಸುಟ್ಟು ಹಾಕಿದ್ದಾರೆ. ಏಕಾಏಕಿ ದರ ಅಷ್ಟು ಯಾಕೆ ಕುಸಿದಿದೆ ಅಂತ ಗೊತ್ತಿಲ್ಲ. ಇದನ್ನ ತನಿಖೆ ಮಾಡಿ ತಿಳಿಸಿ ಅಂತ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ಬಂಧಿತವಾಗಿರುವ ನಾಶಿಪುಡಿಗೂ ಮತ್ತು ಈ ಘಟನೆಗೂ ಸಂಬಂಧವಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಬೆಂಗಳೂರಿನಲ್ಲಿ ಉತ್ತರಿಸಿದ ಅವರು, ಅದಕ್ಕೂ, ಇದಕ್ಕೂ ಸಂಬಂಧ ಇಲ್ಲ. ಯಾರು ಕಾರಣ ಅಂತ ಕಂಡುಹಿಡಿಯಬೇಕಿದೆ. ಇವತ್ತಿನಿಂದ ಎಲ್ಲ ಪ್ರಕ್ರಿಯೆ ಮತ್ತೆ ಆರಂಭವಾಗುತ್ತದೆ ಎಂದರು. ಇನ್ನು ಬಾಂಬ್ ಸ್ಫೋಟದ ಆರೋಪಿ ಮಲೆನಾಡಿನ ವ್ಯಕ್ತಿ ಎಂಬ ಶಂಕೆ ವ್ಯಕ್ತವಾದ ವಿಚಾರವಾಗಿ ಮಾತನಾಡಿದ ಅವರು, ನಾನು ಮಾಧ್ಯಮಗಳಲ್ಲಿ ನೋಡಿದೆ. ಕರ್ನಾಟಕದವನು ಎಂಬುವುದು ಊಹಾಪೋಹ. ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದಾಗ ಸತ್ಯ ಗೊತ್ತಾಗುತ್ತದೆ ಎಂದರು.