ನಂಜನಗೂಡು ತಾಲೂಕಿನ ಹದಿನಾರು ಮತ್ತು ನಗರ್ಲೆ ಸಮೀಪ ಕಪಿಲಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸುವ ಸಲುವಾಗಿ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಥಳ ಪರಿಶೀಲಿಸಿದರು.
ನಂತರ ಅವರು ಮಾತನಾಡಿ, ಹದಿನಾರು ಮತ್ತು ನಗರ್ಲೆ ಗ್ರಾಮದಿಂದ ಟಿ. ನರಸೀಪುರ ಮತ್ತು ನಂಜನಗೂಡು ತಾಲೂಕು ಕೇಂದ್ರವನ್ನು ಹಾಗೂ ಚಾಮರಾಜನಗರ ಜಿಲ್ಲೆಯನ್ನು ಸಂಪರ್ಕಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದ ಜನರು ಪಟ್ಟಣಗಳಿಗೆ ಸಂಪರ್ಕ ಪಡೆದುಕೊಳ್ಳಲು ಈ ಸೇತುವೆ ಬಹಳ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇದನ್ನು ಗಮನಿಸಿ ಈ ಸೇತುವೆ ನಿರ್ಮಾಣಕ್ಕೆ 30 ಕೋಟಿ ರು. ಅನುದಾನವನ್ನು ಒದಗಿಸಲು ಅನುಮೋದನೆ ನೀಡಿದ್ದು, ಶೀಘ್ರದಲ್ಲೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಜಿಪಂ ಮಾಜಿ ಸದಸ್ಯ ಎಚ್.ಎನ್. ನಂಜಪ್ಪ, ಗ್ರಾಪಂ ಒಕ್ಕೂಟದ ಜಿಲ್ಲಾಧ್ಯಕ್ಷ ನಾಗರಾಜು ಇದ್ದರು.