ಪ್ರತಿನಿಧಿ ವರದಿ ಹಾಸನ ಆಲೂರು ತಾಲೂಕು ಬೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಸಾರಿಗೆ ಬಸ್ ತಡೆದು ಆವಾಜ್ ಹಾಕಿದವನಿಗೆ ಬಸ್ ಚಾಲಕ ಹಾಗೂ ಪ್ರಯಾಣಿಕರು ಸೇರಿ ಗುರುವಾರ ರಾತ್ರಿ ಥಳಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ಗೆ ಎದುರಿನಿಂದ ಬಂದ ಕಾರು ಚಾಲಕ ಕಾರನ್ನು ಅಡ್ಡಲಾಗಿ ನಿಲ್ಲಿಸಿ ಚಾಲಕನನ್ನು ನಿಂದಿಸಿದ ಎನ್ನಲಾಗಿದ್ದು, ಇದಕ್ಕೆ ಪ್ರತಿಯಾಗಿ ಬಸ್ ನ ಕೆಲವು ಪ್ರಯಾಣಿಕರು ಕೆಳಗಿಳಿದು ಕಾರು ಚಾಲಕನಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ಪ್ರಯಾಣಿಕರು ಕಾರು ಚಾಲಕನನ್ನು ಬಸ್ ಒಳಗೆ ಕರೆತಂದು ಥಳಿಸಿದ್ದಾರೆ. ನಂತರ ಆತನನ್ನು ಕೆಳಗಿಳಿಸಿ ಬಸ್ ಮುಂದೆ ಚಲಿಸಿದೆ ಎಂದು ತಿಳಿದು ಬಂದಿದೆ.
Leave a comment