ಮೈಸೂರು: ದಸರಾ ಮಹೋತ್ಸವ ಆರಂಭಕ್ಕೂ ಮುನ್ನಾ ಮೈಸೂರಿನಲ್ಲಿ ಗುಂಡಿ ಬಿದ್ದಿರುವ ರಸ್ತೆಗಳ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್ ಹೇಳಿದ್ದಾರೆ.
ಗುಂಡಿ ಬಿದ್ದಿರುವ ರಸ್ತೆಗಳನ್ನು ಮುಚ್ಚವ ಕಾರ್ಯ ಈಗಾಗಲೇ ಆರಂಭವಾಗಿದೆ. 1.35 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಟೆಂಡರ್ ಆಗಿ ಕೆಲಸ ಕೂಡ ನಡೆಯುತ್ತಿದೆ. ಮಹಾನಗರಪಾಲಿಕೆಯ 9 ವಲಯಗಳ ವ್ಯಾಪ್ತಿಯಲ್ಲೂ ರಸ್ತೆಗಳ ದುರಸ್ತಿ ಕಾರ್ಯ ಮಾಡಲಾಗುವುದು. ಸದ್ಯಕ್ಕೆ ಗುಂಡಿ ಬಿದ್ದಿರುವ ರಸ್ತೆಗಳ ಪ್ಯಾಚ್ ವರ್ಕ್ ಮಾತ್ರ ಮಾಡಲಾಗುತ್ತಿದೆ. ದಸರಾ ಮಹೋತ್ಸವ ಆರಂಭಕ್ಕೂ ಮುನ್ನಾ ಮೈಸೂರಿನಲ್ಲಿ ಗುಂಡಿ ಬಿದ್ದಿರುವ ರಸ್ತೆಗಳ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಪಾಲಿಕೆ ಆಯುಕ್ತ ಇಂದು ತಿಳಿಸಿದ್ದಾರೆ.